ರಾಜ್ಯದ ಹವಾಮಾನ ವರದಿ: 9-12-2023

Public TV
1 Min Read

ಮಿಚಾಂಗ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚಾಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.

ಬೆಂಗಳೂರು, ಶಿವಮೊಗ್ಗ, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಹುಬ್ಬಳ್ಳಿ, ಚಿತ್ರದುರ್ಗ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರ (ಉತ್ತರಕನ್ನಡ)ದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 33-26
ಶಿವಮೊಗ್ಗ: 31-21
ಬೆಳಗಾವಿ: 31-20
ಮೈಸೂರು: 29-21

ಮಂಡ್ಯ: 29-21
ಮಡಿಕೇರಿ: 25-15
ರಾಮನಗರ: 28-21
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 26-18

ಕೋಲಾರ: 26-18
ತುಮಕೂರು: 27-19
ಉಡುಪಿ: 33-25
ಕಾರವಾರ: 33-26
ಚಿಕ್ಕಮಗಳೂರು: 27-19
ದಾವಣಗೆರೆ: 29-21

ಹುಬ್ಬಳ್ಳಿ: 31-21
ಚಿತ್ರದುರ್ಗ: 28-20
ಹಾವೇರಿ: 31-21
ಬಳ್ಳಾರಿ: 29-21
ಗದಗ: 31-21
ಕೊಪ್ಪಳ: 30-21

ರಾಯಚೂರು: 31-21
ಯಾದಗಿರಿ: 32-21
ವಿಜಯಪುರ: 30-20
ಬೀದರ್: 28-17
ಕಲಬುರಗಿ: 31-19
ಬಾಗಲಕೋಟೆ: 31-21

Share This Article