ರಾಜ್ಯದ ಹವಾಮಾನ ವರದಿ: 05-10-2021

Public TV
1 Min Read

ರಾಜ್ಯದಲ್ಲಿ ಶಾಹೀನ್ ಚಂಡಮಾರುತ ಪ್ರಭಾವ ಬೀರಿದ್ದು ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಧ್ಯೆ ಅಕ್ಟೋಬರ್ 5 ರಿಂದ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರಿನಲ್ಲೂ ಮಳೆಯಾಗಲಿದ್ದು ಎಲ್ಲ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಿಜಾಪುರ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯ ಸೂಚನೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಈಶಾನ್ಯ ಭಾರತದ ಕೆಲ ರಾಜ್ಯಗಳು , ವಿದರ್ಭ, ಮರಾಠವಾಡ, ಮಧ್ಯ ಕರ್ನಾಟಕ ಮತ್ತು ತಮಿಳುನಾಡಿನ ಹೆಚ್ಚು ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಅ. 4 ಮತ್ತು 5 ರಂದು ಭಾರಿ ಮಳೆ ಸುರಿಯುವ ನಿರೀಕ್ಷೆ ಇರುವ ಕಾರಣ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 28-21
ಮಂಗಳೂರು: 31-24
ಶಿವಮೊಗ್ಗ: 32-22
ಬೆಳಗಾವಿ: 30-21
ಮೈಸೂರು: 31-21

ಮಂಡ್ಯ: 31-22
ರಾಮನಗರ: 31-22
ಮಡಿಕೇರಿ: 26-17
ಹಾಸನ: 29-20
ಚಾಮರಾಜನಗರ: 30-22

ಚಿಕ್ಕಬಳ್ಳಾಪುರ: 30-20
ಕೋಲಾರ: 28-21
ತುಮಕೂರು: 31-21
ಉಡುಪಿ: 31-24
ಕಾರವಾರ: 32-26

ಚಿಕ್ಕಮಗಳೂರು: 29-19
ದಾವಣಗೆರೆ: 32-22
ಚಿತ್ರದುರ್ಗ: 32-22
ಹಾವೇರಿ: 32-22
ಬಳ್ಳಾರಿ: 33-23

ಗದಗ: 31-22
ಕೊಪ್ಪಳ: 33-23
ರಾಯಚೂರು: 33-23
ಯಾದಗಿರಿ: 32-23

rain

ವಿಜಯಪುರ: 28-21
ಬೀದರ್: 29-22
ಕಲಬುರಗಿ: 32-23
ಬಾಗಲಕೋಟೆ: 32-23

Share This Article
Leave a Comment

Leave a Reply

Your email address will not be published. Required fields are marked *