ರಾಜ್ಯದ ಹವಾಮಾನ ವರದಿ: 19-09-2024

Public TV
1 Min Read

ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ, ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದ ಸ್ಥಳಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 30-19
ಮಂಗಳೂರು: 29-24
ಶಿವಮೊಗ್ಗ: 29-20
ಬೆಳಗಾವಿ: 28-19
ಮೈಸೂರು: 31-19

weather
ಮಂಡ್ಯ: 32-20
ಮಡಿಕೇರಿ: 24-16
ರಾಮನಗರ: 32-19
ಹಾಸನ: 28-17
ಚಾಮರಾಜನಗರ: 32-20
ಚಿಕ್ಕಬಳ್ಳಾಪುರ: 30-19


ಕೋಲಾರ: 32-21
ತುಮಕೂರು: 30-19
ಉಡುಪಿ: 29-23
ಕಾರವಾರ: 29-24
ಚಿಕ್ಕಮಗಳೂರು: 27-17
ದಾವಣಗೆರೆ: 30-21

ಹುಬ್ಬಳ್ಳಿ: 29-21
ಚಿತ್ರದುರ್ಗ: 29-20
ಹಾವೇರಿ: 29-21
ಬಳ್ಳಾರಿ: 34-23
ಗದಗ: 31-21
ಕೊಪ್ಪಳ: 32-22

ರಾಯಚೂರು: 33-23
ಯಾದಗಿರಿ: 33-23
ವಿಜಯಪುರ: 32-22
ಬೀದರ್: 31-22
ಕಲಬುರಗಿ: 33-23
ಬಾಗಲಕೋಟೆ: 32-22

Share This Article