ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

Public TV
1 Min Read

ಮಂಡ್ಯ:  ಕೆಆರ್‌ಎಸ್‍ನಲ್ಲಿ (KRS) ಗಣನೀಯ ಪ್ರಮಾಣದಲ್ಲಿ ನೀರು (Water) ಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ (TamilNadu) ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.

ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ (Rain) ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ.

 

ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.

ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್‍ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್‌ಎಸ್‍ನಲ್ಲಿ 21 ಟಿಎಂಸಿ ನೀರಿದೆ. ಇದನ್ನೂ ಓದಿ: ಲೋಕಸಭೆಗೆ ಕಮಲ, ತೆನೆ ಮೈತ್ರಿ ಫೈನಲ್ – ಜೆಡಿಎಸ್‍ಗೆ 4 ಕ್ಷೇತ್ರವಷ್ಟೇ ಬಿಡಲು ಬಿಜೆಪಿ ಒಪ್ಪಿಗೆ

 


Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್