ರಾಜ್ಯದ ಹವಾಮಾನ ವರದಿ: 05-06-2024

Public TV
1 Min Read

ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಲರ್ಟ್ ನೀಡಿದೆ.

ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಕೊಟ್ಟಿದ್ದು, 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಎಲ್ಲಾ ಜಿಲ್ಲೆಗಳಿಗೆ ಮುಂದಿನ 4 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು, ಮಿಂಚು ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-25
ಶಿವಮೊಗ್ಗ: 29-22
ಬೆಳಗಾವಿ: 29-22
ಮೈಸೂರು: 29-22

ಮಂಡ್ಯ: 29-22
ಮಡಿಕೇರಿ: 23-18
ರಾಮನಗರ: 29-22
ಹಾಸನ: 27-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21

ಕೋಲಾರ: 28-22
ತುಮಕೂರು: 27-21
ಉಡುಪಿ: 28-25
ಕಾರವಾರ: 29-26
ಚಿಕ್ಕಮಗಳೂರು: 26-19
ದಾವಣಗೆರೆ: 29-23

ಹುಬ್ಬಳ್ಳಿ: 29-22
ಚಿತ್ರದುರ್ಗ: 28-22
ಹಾವೇರಿ: 29-23
ಬಳ್ಳಾರಿ: 31-24
ಗದಗ: 29-23
ಕೊಪ್ಪಳ: 30-23

ರಾಯಚೂರು: 31-24
ಯಾದಗಿರಿ: 32-25
ವಿಜಯಪುರ: 30-24
ಬೀದರ್: 31-24
ಕಲಬುರಗಿ: 32-24
ಬಾಗಲಕೋಟೆ: 30-24

Share This Article