ರಾಜ್ಯದ ಹವಾಮಾನ ವರದಿ: 08-11-2023

Public TV
1 Min Read

ರಾಜ್ಯದಲ್ಲಿ ಮತ್ತೆ ಹಿಂಗಾರು ಮಳೆ ಅಬ್ಬರಿಸಲಿದ್ದು, ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಗುಡುಗಿನ ಜೊತೆಗೆ ಮೇಲ್ಮೈ ಗಾಳಿ ಬಲವಾಗಿ ಬೀಸುವ ಸಾಧ್ಯತೆಯಿದ್ದು, ಮರದ ಕೆಳಗೆ, ತಾತ್ಕಾಲಿಕ ಶೆಲ್ಟರ್ ಕೆಳಗೆ ನಿಲ್ಲದಿರಿ ಎಂದು ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ ಜೊತೆಗೆ ಧಾರಾಕಾರ ಮಳೆ ಸಾಧ್ಯತೆಯಿದೆ. ಸಂಜೆಯ ನಂತರ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 31-25
ಶಿವಮೊಗ್ಗ: 29-21
ಬೆಳಗಾವಿ: 28-21
ಮೈಸೂರು: 28-21

ಮಂಡ್ಯ: 29-21
ಮಡಿಕೇರಿ: 24-18
ರಾಮನಗರ: 28-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-19

ಕೋಲಾರ: 27-21
ತುಮಕೂರು: 27-21
ಉಡುಪಿ: 31-24
ಕಾರವಾರ: 32-25
ಚಿಕ್ಕಮಗಳೂರು: 26-19
ದಾವಣಗೆರೆ: 29-22

ಹುಬ್ಬಳ್ಳಿ: 29-22
ಚಿತ್ರದುರ್ಗ: 28-21
ಹಾವೇರಿ: 31-22
ಬಳ್ಳಾರಿ: 29-22
ಗದಗ: 29-22
ಕೊಪ್ಪಳ: 29-22

ರಾಯಚೂರು: 31-22
ಯಾದಗಿರಿ: 31-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 30-22
ಬಾಗಲಕೋಟೆ: 29-23

Share This Article