ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನ ಏರಿಳಿತವಾಗಲಿದ್ದು, ಸಂಜೆ ವೇಳೆಗೆ ಸೋನೆಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಗಳೂರು, ಶಿವಮೊಗ್ಗ, ಬೆಳಗಾವಿ, ಮೈಸೂರು, ಕೊಡಗು, ಹಾಸನ, ಉಡುಪಿ ಜಿಲ್ಲೆಗಳಲಿ ಭಾರೀ ಮಳೆಯಾಗಲಿದ್ದು, ಕಾರವಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬೆಂಗಳೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 30-20
ಮಂಗಳೂರು: 30-24
ಶಿವಮೊಗ್ಗ: 30-22
ಬೆಳಗಾವಿ: 29-22
ಮೈಸೂರು: 29-21
ಮಂಡ್ಯ: 32-21
ಕೊಡಗು: 24-18
ರಾಮನಗರ: 32-21
ಹಾಸನ: 27-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 30-19
ಕೋಲಾರ: 32-21
ತುಮಕೂರು: 31-21
ಉಡುಪಿ: 30-25
ಕಾರವಾರ: 30-26
ಚಿಕ್ಕಮಗಳೂರು: 26-19
ದಾವಣಗೆರೆ: 33-22
ಚಿತ್ರದುರ್ಗ: 32-22
ಹಾವೇರಿ: 32-33
ಬಳ್ಳಾರಿ: 36-24
ಗದಗ: 33-22
ಕೊಪ್ಪಳ: 34-33
ರಾಯಚೂರು: 37-25
ಯಾದಗಿರಿ: 37-26
ವಿಜಯಪುರ: 34-24
ಬೀದರ್: 24-17
ಕಲಬುರಗಿ: 37-25
ಬಾಗಲಕೋಟೆ: 35-24