ರಾಜ್ಯದ ಹಲವೆಡೆ ಇಂದಿನಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ಮಂಡ್ಯ, ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ. ಅತ್ತ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 2-3 ಡಿಗ್ರಿ ತಾಪಮಾನ ಹೆಚ್ಚಳದ ಸಾಧ್ಯತೆಯಿದೆ. ಧಾರವಾಡ, ರಾಯಚೂರು, ಕಲಬುರಗಿ, ಹಾವೇರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆ, ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 30-25
ಶಿವಮೊಗ್ಗ: 33-22
ಬೆಳಗಾವಿ: 32-21
ಮೈಸೂರು: 31-21
ಮಂಡ್ಯ: 32-22
ಮಡಿಕೇರಿ: 24-18
ರಾಮನಗರ: 31-21
ಹಾಸನ: 28-20
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-19
ಕೋಲಾರ: 29-21
ತುಮಕೂರು: 31-21
ಉಡುಪಿ: 31-25
ಕಾರವಾರ: 31-26
ಚಿಕ್ಕಮಗಳೂರು: 28-19
ದಾವಣಗೆರೆ: 34-23
ಹುಬ್ಬಳ್ಳಿ: 33-22
ಚಿತ್ರದುರ್ಗ: 33-22
ಹಾವೇರಿ: 34-23
ಬಳ್ಳಾರಿ: 36-24
ಗದಗ: 34-22
ಕೊಪ್ಪಳ: 35-23
ರಾಯಚೂರು: 35-24
ಯಾದಗಿರಿ: 34-23
ವಿಜಯಪುರ: 34-23
ಬೀದರ್: 32-22
ಕಲಬುರಗಿ: 34-23
ಬಾಗಲಕೋಟೆ: 36-24
Web Stories