ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಡಿಕೇರಿ, ಮಂಗಳೂರು, ಶಿವಮೊಗ್ಗ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಹಗುರ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 29-24
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 29-21
ಮಂಡ್ಯ: 31-22
ಮಡಿಕೇರಿ: 23-17
ರಾಮನಗರ: 30-24
ಹಾಸನ: 27-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 29-19
ಕೋಲಾರ: 29-21
ತುಮಕೂರು: 30-21
ಉಡುಪಿ: 29-25
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 30-22
ಹುಬ್ಬಳ್ಳಿ: 29-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 32-24
ಗದಗ: 30-22
ಕೊಪ್ಪಳ: 31-23
ರಾಯಚೂರು: 33-24
ಯಾದಗಿರಿ: 31-23
ವಿಜಯಪುರ: 30-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 33-23
Web Stories