ಮಧ್ಯ ಕರ್ನಾಟಕ, ಕರಾವಳಿ, ಹಳೆ ಮೈಸೂರು ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದು, ಅದರಲ್ಲೂ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಬೆಂಗಳೂರು ನಗರ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು, ರಾಮನಗರ ಸೇರಿ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಅಕ್ಟೋಬರ್ 15 ರವರೆಗೆ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 28-21
ಮಂಗಳೂರು: 30-25
ಶಿವಮೊಗ್ಗ: 31-20
ಬೆಳಗಾವಿ: 29-20
ಮೈಸೂರು: 31-22
ಮಂಡ್ಯ: 30-22
ಮಡಿಕೇರಿ: 30-22
ರಾಮನಗರ: 28-21
ಹಾಸನ: 28-19
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 28-20
ಕೋಲಾರ: 28-21
ತುಮಕೂರು: 28-20
ಉಡುಪಿ: 31-24
ಕಾರವಾರ: 32-26
ಚಿಕ್ಕಮಗಳೂರು: 27-18
ದಾವಣಗೆರೆ: 31-21
ಹುಬ್ಬಳ್ಳಿ: 32-20
ಚಿತ್ರದುರ್ಗ: 29-21
ಹಾವೇರಿ: 32-21
ಬಳ್ಳಾರಿ: 32-21
ಗದಗ: 32-21
ಕೊಪ್ಪಳ: 32-21
ರಾಯಚೂರು: 32-22
ಯಾದಗಿರಿ: 32-22
ವಿಜಯಪುರ: 32-21
ಬೀದರ್: 29-19
ಕಲಬುರಗಿ: 29-20
ಬಾಗಲಕೋಟೆ: 32-21