ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕೆಲ ಜಿಲ್ಲೆಗಳಲ್ಲಿ 2 ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಅಥವಾ ಸಂಜೆಯ ವೇಳೆ ವರುಣನ ಆಗಮನದ ನಿರೀಕ್ಷೆಯಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 30-25
ಶಿವಮೊಗ್ಗ: 32-22
ಬೆಳಗಾವಿ: 31-21
ಮೈಸೂರು: 30-21
ಮಂಡ್ಯ: 30-21
ಮಡಿಕೇರಿ: 25-17
ರಾಮನಗರ: 29-21
ಹಾಸನ: 28-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-19
ಕೋಲಾರ: 29-20
ತುಮಕೂರು: 31-21
ಉಡುಪಿ: 31-24
ಕಾರವಾರ: 31-26
ಚಿಕ್ಕಮಗಳೂರು: 28-19
ದಾವಣಗೆರೆ: 33-23
ಹುಬ್ಬಳ್ಳಿ: 33-22
ಚಿತ್ರದುರ್ಗ: 33-22
ಹಾವೇರಿ: 33-23
ಬಳ್ಳಾರಿ: 35-24
ಗದಗ: 33-23
ಕೊಪ್ಪಳ: 35-23
ರಾಯಚೂರು: 34-24
ಯಾದಗಿರಿ: 34-23
ವಿಜಯಪುರ: 34-24
ಬೀದರ್: 32-21
ಕಲಬುರಗಿ: 34-23
ಬಾಗಲಕೋಟೆ: 35-24
Web Stories