ರಾಜ್ಯದ ಹವಾಮಾನ ವರದಿ 16-12-2024

Public TV
1 Min Read

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 17ರಿಂದ ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಡಿಸೆಂಬರ್ 19 ಮತ್ತು 20ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೇ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 25-17
ಮಂಗಳೂರು: 30-22
ಶಿವಮೊಗ್ಗ: 27-14
ಬೆಳಗಾವಿ: 27-15
ಮೈಸೂರು:27-17

ಮಂಡ್ಯ: 27-17
ಮಡಿಕೇರಿ: 27-15
ರಾಮನಗರ: 27-17
ಹಾಸನ: 25-14
ಚಾಮರಾಜನಗರ: 28-16
ಚಿಕ್ಕಬಳ್ಳಾಪುರ: 24-15

ಕೋಲಾರ: 24-16
ತುಮಕೂರು: 26-16
ಉಡುಪಿ: 29-20
ಕಾರವಾರ: 31-21
ಚಿಕ್ಕಮಗಳೂರು: 24-13
ದಾವಣಗೆರೆ: 28-16

ಹುಬ್ಬಳ್ಳಿ: 28-14
ಚಿತ್ರದುರ್ಗ: 26-15
ಹಾವೇರಿ: 28-14
ಬಳ್ಳಾರಿ: 28-16
ಗದಗ: 28-14
ಕೊಪ್ಪಳ: 28-16

ರಾಯಚೂರು: 28-16
ಯಾದಗಿರಿ: 28-14
ವಿಜಯಪುರ: 28-14
ಬೀದರ್: 27-12
ಕಲಬುರಗಿ: 28-13
ಬಾಗಲಕೋಟೆ: 29-15

Share This Article