ರಾಜ್ಯದ ಹವಾಮಾನ ವರದಿ 17-08-2025

By
1 Min Read

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 26-20
ಮಂಗಳೂರು: 26-23
ಶಿವಮೊಗ್ಗ: 25-21
ಬೆಳಗಾವಿ: 26-20
ಮೈಸೂರು: 28-21

ಮಂಡ್ಯ: 28-21
ಮಡಿಕೇರಿ: 23-19
ರಾಮನಗರ: 27-21
ಹಾಸನ: 24-19
ಚಾಮರಾಜನಗರ: 29-20
ಚಿಕ್ಕಬಳ್ಳಾಪುರ: 26-19

ಕೋಲಾರ: 28-21
ತುಮಕೂರು: 27-19
ಉಡುಪಿ: 27-23
ಕಾರವಾರ: 27-24
ಚಿಕ್ಕಮಗಳೂರು: 23-18
ದಾವಣಗೆರೆ: 26-21

ಹುಬ್ಬಳ್ಳಿ: 26-21
ಚಿತ್ರದುರ್ಗ: 26-21
ಹಾವೇರಿ: 27-21
ಬಳ್ಳಾರಿ: 31-23
ಗದಗ: 27-21
ಕೊಪ್ಪಳ: 28-22

ರಾಯಚೂರು: 30-23
ಯಾದಗಿರಿ: 30-23
ವಿಜಯಪುರ: 28-22
ಬೀದರ್: 27-23
ಕಲಬುರಗಿ: 29-23
ಬಾಗಲಕೋಟೆ: 29-22

Share This Article