ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರದ ಮಧ್ಯೆ ಕರ್ನಾಟಕಕ್ಕೆ ಮುಂಗಾರಿನ ಮೇಘಸ್ಫೋಟದ ಮುನ್ಸೂಚನೆ ಸಿಕ್ಕಿದೆ. ಜೂನ್ 18ರ ಬಳಿಕ ಮುಂಗಾರು ಪ್ರಬಲವಾಗಲಿದ್ದು ಜೂನ್ 21ರವರೆಗೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಿಗೆ ಮಳೆಯಾರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 18, 19ರಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. 2-3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದ್ದು, 65-110 ಎಂಎಂ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ 39 ಡಿಗ್ರಿ, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 30-26
ಶಿವಮೊಗ್ಗ: 31-23
ಬೆಳಗಾವಿ: 30-22
ಮೈಸೂರು: 31-22
ಮಂಡ್ಯ: 32-22
ಮಡಿಕೇರಿ: 24-18
ರಾಮನಗರ: 32-22
ಹಾಸನ: 29-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 31-20
ಕೋಲಾರ: 31-22
ತುಮಕೂರು: 32-22
ಉಡುಪಿ: 31-26
ಕಾರವಾರ: 31-27
ಚಿಕ್ಕಮಗಳೂರು: 27-20
ದಾವಣಗೆರೆ: 34-23
ಹುಬ್ಬಳ್ಳಿ: 33-23
ಚಿತ್ರದುರ್ಗ: 34-23
ಹಾವೇರಿ: 33-23
ಬಳ್ಳಾರಿ: 38-26
ಗದಗ: 35-23
ಕೊಪ್ಪಳ: 36-24
ರಾಯಚೂರು: 39-27
ಯಾದಗಿರಿ: 39-27
ವಿಜಯಪುರ: 37-24
ಬೀದರ್: 37-26
ಕಲಬುರಗಿ: 39-27
ಬಾಗಲಕೋಟೆ: 37-24