ರಾಜ್ಯದ ಹವಾಮಾನ ವರದಿ: 20-06-2023

Public TV
1 Min Read

ಬಿಪರ್‌ಜಾಯ್ ಚಂಡಮಾರುತದ ಪರಿಣಾಮ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯ ಉಷ್ಣಾಂಶಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಿರಲಿದೆ. ಬಿಪರ್‌ಜಾಯ್ ಚಂಡಮಾರುತದ ಕಾರಣ ಭಾರೀ ಅಲೆಗಳು ಉಂಟಾಗುವ ಸಾಧ್ಯತೆಗಳಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ 39 ಡಿಗ್ರಿ, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 31-26
ಶಿವಮೊಗ್ಗ: 31-23
ಬೆಳಗಾವಿ: 33-22
ಮೈಸೂರು: 28-21

ಮಂಡ್ಯ: 29-22
ಮಡಿಕೇರಿ: 23-18
ರಾಮನಗರ: 29-22
ಹಾಸನ: 27-20
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-20

weather

ಕೋಲಾರ: 29-22
ತುಮಕೂರು: 28-21
ಉಡುಪಿ: 31-26
ಕಾರವಾರ: 32-27
ಚಿಕ್ಕಮಗಳೂರು: 27-20
ದಾವಣಗೆರೆ: 33-23

ಹುಬ್ಬಳ್ಳಿ: 34-23
ಚಿತ್ರದುರ್ಗ: 32-22
ಹಾವೇರಿ: 34-23
ಬಳ್ಳಾರಿ: 37-25
ಗದಗ: 36-23
ಕೊಪ್ಪಳ: 36-24

ರಾಯಚೂರು: 39-27
ಯಾದಗಿರಿ: 39-27
ವಿಜಯಪುರ: 38-24
ಬೀದರ್: 38-26
ಕಲಬುರಗಿ: 39-27
ಬಾಗಲಕೋಟೆ: 38-24

Share This Article