ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ಹಲವು ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 24-20
ಮಂಗಳೂರು: 26-24
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 25-21
ಮಂಡ್ಯ: 26-22
ಮಡಿಕೇರಿ: 21-19
ರಾಮನಗರ: 26-21
ಹಾಸನ: 22-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 24-20
ಕೋಲಾರ: 24-21
ತುಮಕೂರು: 26-21
ಉಡುಪಿ: 26-24
ಕಾರವಾರ: 27-25
ಚಿಕ್ಕಮಗಳೂರು: 21-18
ದಾವಣಗೆರೆ: 24-22
ಹುಬ್ಬಳ್ಳಿ: 24-22
ಚಿತ್ರದುರ್ಗ: 24-21
ಹಾವೇರಿ: 25-22
ಬಳ್ಳಾರಿ: 28-23
ಗದಗ: 25-22
ಕೊಪ್ಪಳ: 27-23
ರಾಯಚೂರು: 29-24
ಯಾದಗಿರಿ: 28-24
ವಿಜಯಪುರ: 28-23
ಬೀದರ್: 29-23
ಕಲಬುರಗಿ: 28-23
ಬಾಗಲಕೋಟೆ: 30-23