ರಾಜ್ಯದ ಹವಾಮಾನ ವರದಿ: 26-08-2024

Public TV
1 Min Read

ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 24-20
ಮೈಸೂರು: 28-21

ಮಂಡ್ಯ: 29-21
ಮಡಿಕೇರಿ: 21-17
ರಾಮನಗರ: 29-21
ಹಾಸನ: 25-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 28-20

ಕೋಲಾರ: 29-21
ತುಮಕೂರು: 28-20
ಉಡುಪಿ: 28-24
ಕಾರವಾರ: 27-25
ಚಿಕ್ಕಮಗಳೂರು: 23-19
ದಾವಣಗೆರೆ: 27-22

ಹುಬ್ಬಳ್ಳಿ: 26-21
ಚಿತ್ರದುರ್ಗ: 27-21
ಹಾವೇರಿ: 26-22
ಬಳ್ಳಾರಿ: 31-23
ಗದಗ: 27-21
ಕೊಪ್ಪಳ: 28-22

ರಾಯಚೂರು: 31-23
ಯಾದಗಿರಿ: 30-23
ವಿಜಯಪುರ: 27-22
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 28-22

Share This Article