ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಮಳೆ ಮುನ್ಸೂಚನೆ – ಎಲ್ಲೆಲ್ಲಿ ಜಾಸ್ತಿ ಮಳೆಯಾಗಲಿದೆ?

By
1 Min Read

ಬೆಂಗಳೂರು: ರಾಜ್ಯದ (Karnataka) ಮೇಲೆ ವರುಣ ಮತ್ತೆ ಕೃಪೆ ತೋರಿದ್ದಾನೆ. ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಅ.24ರ ವರೆಗೆ ಭಾರೀ ಮಳೆಯಾಗಲಿದೆ (Rain )ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸುಮಾರು 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದರಲ್ಲಿ ಕೊಡಗು, ವಿರಾಜಪೇಟೆ, ಹಾಗೂ ಮೈಸೂರಿನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಇದರಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಯಲ್ಲಾಪುರ, ಕದ್ರಾ, ಗೋಕರ್ಣ, ಉತ್ತರ ಕನ್ನಡದಲ್ಲೂ ಮಳೆಯಾಗಲಿದೆ. ಇದನ್ನೂ ಓದಿ: ಗಾಜಾ ಆಸ್ಪತ್ರೆಯ ಮೇಲೆ ರಾಕೆಟ್‌ ದಾಳಿಗೆ 500 ಬಲಿ – ದಾಳಿ ಮಾಡಿದವರು ಯಾರು?

ಮಂಗಳೂರು ವಿಮಾನ ನಿಲ್ದಾಣ, ಜಯಪುರ, ಪಣಂಬೂರು, ಮಾಣಿ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಸಿದ್ದಾಪುರ, ಪುತ್ತೂರು, ಕಿರವತ್ತಿ, ಕೋಟ, ಕೊಲ್ಲೂರು, ಕಡೂರು, ತರೀಕೆರೆ, ಕಮ್ಮರಡಿ, ಹಾರಂಗಿ, ಶೃಂಗೇರಿ, ಮುಲ್ಕಿ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಟಿ ನರಸೀಪುರ, ಹುಣಸೂರು, ಶಿವಮೊಗ್ಗ, ಅರಕಲಗೂಡು, ಬೆಳ್ಳೂರು ಮತ್ತು ಕುಣಿಗಲ್ ಭಾಗಗಳಲ್ಲೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ (Bengaluru) ಮಧ್ಯಾಹ್ನದ ವೇಳೆಗೆ ಮಳೆ ಬೀಳಲಿದೆ ಎಂದು ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿಯ ದರ್ಶನ – 1 ನಿಮಿಷ ಮೊದಲೇ ತೀರ್ಥೋದ್ಭವ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್