ನಟಿ ವಿಜಯಲಕ್ಷ್ಮಿರನ್ನ ಭೇಟಿ ಮಾಡಿ ಸಹಾಯಕ್ಕೆ ಮುಂದಾದ ಕಾರುಣ್ಯ ರಾಮ್

Public TV
1 Min Read

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟಿ ವಿಜಯಲಕ್ಷ್ಮಿ ಅವರನ್ನು ಇಂದು ನಟಿ ಕಾರುಣ್ಯ ರಾಮ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ್ದ ಕಾರುಣ್ಯ ರಾಮ್, ವಿಜಯ ಲಕ್ಷ್ಮಿ ಅವರಿಗೆ ಧೈರ್ಯ ತುಂಬಿ ಸಹಾಯ ಮಾಡಿದ್ದಾರೆ. ಸದ್ಯ ಕಾರುಣ್ಯ ಕನ್ನಡ ಖಾಸಗಿ ವಾಹಿನಿಯಲ್ಲಿ ಮೂಡಿಬರುತ್ತಿರುವ ಡಾನ್ಸ್ ಶೋದಲ್ಲಿ ಭಾಗವಹಿಸುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಪ ಮಟ್ಟಿಗೆ ಚೇತರಿಸಿಕೊಂಡಿರುವ ವಿಜಯಲಕ್ಷ್ಮಿ ಅವರು ರಾಜ್‍ಕುಮಾರ್ ಹಾಗೂ ಪಾರ್ವತಮ್ಮ ಅವರನ್ನು ನೆನೆದು ಕಾಣಿರಿಟ್ಟಿದ್ದರು. ಅವರಿಲ್ಲದೆ ನಾನು ಅನಾಥೆಯಾಗಿದ್ದು, ಇಂಡಸ್ಟ್ರಿಯಲ್ಲಿ ಸುದೀಪ್ ಸರ್ ಬಿಟ್ಟು ಬೇರೆ ಯಾರಿಗೂ ಕರುಣೆ ಬಂದಿಲ್ಲ. ನಾನು ಏನ್ ತಪ್ಪು ಮಾಡಿದ್ದೀನಿ, ಯಾಕೆ ಇಷ್ಟು ಶಿಕ್ಷೆ ಕೊಡುತ್ತಿದ್ದೀರಿ ಎಂದು ತಮ್ಮ ಮನದಾಳದ ನೋವನ್ನು ಹಂಚಿಕೊಂಡಿದ್ದರು.

ನಾನಿರುವ ಪರಿಸ್ಥಿತಿಯಲ್ಲಿ ಶೀಘ್ರವೇ ನಾನು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಮೊದಲಿಗೆ ನನ್ನ ಬಳಿ ಇರುವುದಕ್ಕೆ ಮನೆ ಇಲ್ಲ. ಬಾಡಿಗೆ ಮನೆಗೆ ಹೋಗಲು ಅಡ್ವಾನ್ಸ್ ಕೊಡುವುದಕ್ಕೂ ಹಣ ಇಲ್ಲ. ಮನೆ ಇಲ್ಲದ ಕಾರಣ ನಾನು ಮನೆ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆರೋಗ್ಯ ಹದಗೆಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *