2017 ರಿಂದ ಕಾಶಿನಾಥ್ ಕ್ಯಾನ್ಸರ್‍ ನಿಂದ ಬಳಲುತ್ತಿದ್ರು, ಹೃದಯಾಘಾತದಿಂದ ಸಾವು- ಡಾ. ರವಿ ತಿಪ್ಪೇಸ್ವಾಮಿ

Public TV
1 Min Read

ಬೆಂಗಳೂರು: 2017 ರಿಂದಲೇ ಕಾಶಿನಾಥ್ ಕ್ಯಾನ್ಸರ್‍ನಿಂದ ಬಳಲುತ್ತಿದ್ದರು. ಚಿಕಿತ್ಸೆ ಮುಗಿದಿತ್ತು. ಆದ್ರೆ ಇಂದು ಮುಂಜಾನೆ ಹೃದಯಾಘಾತದಿಂದ ಕಾಶಿನಾಥ್ ಕೊನೆಯುಸಿರೆಳೆದಿದ್ದಾರೆ ಎಂದು ಶಂಕರ್ ಆಸ್ಪತ್ರೆಯ ವೈದ್ಯರಾದ ಡಾ. ರವಿ ತಿಪ್ಪೇಸ್ವಾಮಿ ಹೇಳಿದ್ದಾರೆ.

ಕಾಶಿನಾಥ್ ನಿಧನದ ಬಳಿಕ ಮಾತನಾಡಿದ ಅವರು, 2017 ರಿಂದಲೇ ಕಾಶಿನಾಥ್ ಕ್ಯಾನ್ಸರ್‍ನಿಂದ ಬಳಲುತ್ತಿದ್ದರು. ಏಳು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ರು. ಹಾರ್ಟ್ ಸ್ಕಿಲ್ಸ್ ಲಿಂಕ್ ಫೋರ್ಮಾ ಅನ್ನೋ ಕ್ಯಾನ್ಸರ್ ಗೆ ಸಂಬಂಧಿಸಿದಂತ ಕಾಯಿಲೆಯಿಂದ ಬಳಲುತ್ತಿದ್ರು. ಒಂದು ತಿಂಗಳ ಹಿಂದೆ ಚಿಕಿತ್ಸೆ ಮುಗಿದಿತ್ತು. ಚಿಕಿತ್ಸೆಗೆ ಚನ್ನಾಗಿಯೇ ಸ್ಪಂದಿಸಿದ್ರು. ಇಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಿದ್ರು.

 

 

2 ದಿನಗಳ ಹಿಂದೆ ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ದಾಖಲಾಗಿದ್ದ ಕಾಶಿನಾಥ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬಸವನಗುಡಿಯ ಎನ್‍ಆರ್ ಕಾಲೋನಿಯ ಎಪಿಎಸ್ ಕಾಲೇಜ್ ಗ್ರೌಂಡ್‍ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕಾಶಿನಾಥ್ ಅವರ ಮಗಳು ದುಬೈನಿಂದ ಬಂದ ನಂತರ ಅಂತಿಮ ವಿಧಿವಿಧಾನ ನಡೆಯಲಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಚಾಮರಾಜಪೇಟೆಯ ಟಿಆರ್ ಮಿಲ್‍ನಲ್ಲಿನ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

https://www.youtube.com/watch?v=Z-vlkIrlNXw

https://www.youtube.com/watch?v=Xs66MPO1im8

https://www.youtube.com/watch?v=4RonOWCUWBo

 

Share This Article
Leave a Comment

Leave a Reply

Your email address will not be published. Required fields are marked *