ಅಂಗಿ ಹರಿದ ಪೊಲೀಸರು: ಪ್ರತಿಭಟನೆ ವೇಳೆ ವೇಣುಗೋಪಾಲ್ ಅಸ್ವಸ್ಥ

Public TV
1 Min Read

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ರ‍್ಯಾಲಿ ಕೈಗೊಂಡಿದ್ದು, ಪ್ರತಿಭಟನೆ ವೇಳೆ ಸಂಸದ ಕೆ.ಸಿ.ವೇಣುಗೋಪಾಲ್ ಅಸ್ವಸ್ಥರಾಗಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದು, ಅವರಿಗೆ ಪ್ರಿಯಾಂಕಾ ಗಾಂಧಿ ಸಹ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಇಡಿ ಕಚೇರಿ ಹೊರಗೆ ಇದ್ದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಬೆಂಬಲ ಸೂಚಿಸಲು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಳು ಬಸ್‍ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.

ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾಗಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *