ಮಗಳ ನಿಶ್ಚಿತಾರ್ಥ ನಿಲ್ಲಿಸಿ ಪ್ರವಾಹ ಪೀಡಿತರಿಗೆ ಹಣ ನೀಡಿದ ಪತ್ರಕರ್ತ

Public TV
2 Min Read

ತಿರುವನಂತಪುರ: ಕಳೆದ 15 ದಿನಗಳಿಂದ ಕೇರಳದಲ್ಲಿ ಅತಿವೃಷ್ಟಿಯಿಂದಾಗಿ ಜನಜೀವನ ನರಕದಂತಾಗಿದ್ದು, ದೇಶಾದ್ಯಂತ ಕೇರಳದ ಸಹಾಯಕಕ್ಕೆ ಮುಂದಾಗುತ್ತಿದ್ದಾರೆ. ಕೇರಳದಲ್ಲಿ ಖಾಸಗಿ ಪತ್ರಿಕೆಯ ಪತ್ರಕರ್ತರೊಬ್ಬರು ತಮ್ಮ ಮಗಳ ನಿಶ್ಚಿತಾರ್ಥವನ್ನು ನಿಲ್ಲಿಸಿ, ಕಾರ್ಯಕ್ರಮಕ್ಕೆ ಖರ್ಚು ಮಾಡಲು ಇರಿಸಿದ್ದ ಎಲ್ಲ ಹಣವನ್ನು ಕೇರಳದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮನೋಜ್ ಎಂಬವರೇ ಮಗಳ ನಿಶ್ಚಿತಾರ್ಥ ನಿಲ್ಲಿಸಿದ ಪತ್ರಕರ್ತ. ಇದೇ ಭಾನುವಾರ ಕನ್ನೂರಿನಲ್ಲಿ ಮಗಳು ದೇವಿ ಮತ್ತು ಗೋಕುಲ್ ಜೊತೆ ನಿಶ್ಚಿ ತಾರ್ಥವನ್ನು ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಯಿಸಲಾಗಿತ್ತು. ಹಲವು ದಿನಗಳಿಂದ ನಮ್ಮ ರಾಜ್ಯದಲ್ಲಿಯೇ ಪ್ರವಾಹ ಉಂಟಾಗಿ ಜನರು ತೊಂದರೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ನಾವು ಸಂತೋಷದಿಂದ ಕಾರ್ಯಕ್ರಮ ಮಾಡೋದು ಸರಿ ಅಲ್ಲ. ಹಾಗಾಗಿ ಅಳಿಯನ ಕುಟುಂಬಸ್ಥರ ಜೊತೆ ಮಾತನಾಡಿ ಅದ್ಧೂರಿ ನಿಶ್ಚಿತಾರ್ಥವನ್ನು ಕ್ಯಾನ್ಸಲ್ ಮಾಡಿದ್ದೇವೆ. ಭಾನುವಾರ ಕೇವಲ ಉಂಗುರವನ್ನು ಬದಲಾಯಿಸಲಾಗುವುದು ಎಂದು ಮನೋಜ್ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಎರಡು ಕುಟುಂಬಸ್ಥರು ಚರ್ಚಿಸಿ ಈ ನಿರ್ಣಯ ತೆಗೆದುಕೊಂಡಿದ್ದು, ನಿಶ್ಚಿತಾರ್ಥಕ್ಕೆ ಮೀಸಲಿರಿಸಿದ್ದ ಹಣವನ್ನ ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದೇವೆ ಎಂದು ಮಂಜು ಸ್ಪಷ್ಟಪಡಿಸಿದ್ದಾರೆ.

ಕೇರಳ ದುರಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈಗಾಗಲೇ ಮೃತಪಟ್ಟವರ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಪರಿಸ್ಥಿತಿಯನ್ನು ಸುಧಾರಿಸಲು ಭಾರತೀಯ ಕೋಸ್ಟ್ ಗಾರ್ಡ್ ನ ನಾಲ್ಕು ಹಡಗುಗಳನ್ನು ಕೊಚ್ಚಿನ್ ಗೆ ಕಳುಹಿಸಲಾಗಿದ್ದು, ಈಗಾಗಲೇ ಪ್ರವಾಹ ಪೀಡಿತ ಹಳ್ಳಿಗಳಿಗೆ 24 ತಂಡಗಳು ಕಾರ್ಯಚರಣೆ ಮಾಡುತ್ತಿವೆ. ಐಸಿಜಿ 1,764 ಜನರನ್ನು ರಕ್ಷಿಸಿದ್ದು, 4,688 ಜನರಿಗೆ ಸುರಕ್ಷಿತ ಸ್ಥಳಕ್ಕೆ ತಲುಪಿಸಿದೆ.

ಶನಿವಾರ ಕಾಸರಗೋಡು ಎರ್ನಾಕುಲಂ ಮತ್ತು ಇಡುಕ್ಕಿ ಒಳಗೊಂಡಂತೆ ಇತರ 13 ಜಿಲ್ಲೆಗಳಿಗೂ ಎಚ್ಚರಿಕೆಯನ್ನು ಸೂಚಿಸಲಾಗಿದೆ. ಶುಕ್ರವಾರ ಬೆಳಗ್ಗೆ 5 ಘಟಕದ ರಾಷ್ಟ್ರೀಯ ವಿಪತ್ತು ಪಡೆ ತಿರುವನಂತಪುರಂ ತಲುಪಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದೆ. ಇಂದು ಕೂಡ 35 ಸದಸ್ಯರ ತಂಡ ತಲುಪುವ ನೀರಿಕ್ಷೆ ಇದೆ. ಇದೀಗ ಐಸಿಜಿ ಪಡೆಯನ್ನು ವಂಡಿಪೆರಿಯರ್ ನಿಂದ ಮಂಜುಮಾಲಾ ಹಳ್ಳಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ 16 ಮಂದಿಯನ್ನು ರಕ್ಷಿಸಲಾಗಿದೆ. ಹಾಗೂ ಅವರಿಗೆ ಸೇವಿಸಲು ಆಹಾರ ಪದಾರ್ಥಗಳನ್ನು ನೀಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *