ಆತ್ಮಹತ್ಯೆ ಮಾಡಿಕೊಳ್ಳಲು ಟವರ್ ಹತ್ತಿದ್ದ ಮಹಿಳೆ ಪ್ರಾಣ ಉಳಿಸಿದ ಕಣಜಗಳು

Public TV
1 Min Read

ತಿರುವನಂತಪುರಂ: ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಮೊಬೈಲ್ ಟವರ್ ಏರಿದ್ದು, ಆಕೆಯ ಪ್ರಾಣವನ್ನು ಕಣಜಗಳು ಉಳಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಏನಿದು ಕಣಜಗಳು ಮನುಷ್ಯರ ಪ್ರಾಣ ಉಳಿಸುತ್ತಾ? ಎಂದು ಯೋಚನೆ ಮಾಡುತ್ತಿದ್ದೀರಾ, ಇದು ನಿಜ. ಕೇರಳದಲ್ಲಿ ಮಹಿಳೆಯೊಬ್ಬಳು ಮೊಬೈಲ್ ಟವರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಆಕೆಯ ಸುತ್ತಲೂ ಕಣಜಗಳು ಸುತ್ತಿಕೊಂಡಿದೆ. ಈ ಹಿನ್ನೆಲೆ ಗಾಬರಿಗೊಂಡ ಮಹಿಳೆ ಟವರ್‌ನಿಂದ ಕೆಳಗೆ ಇಳಿದಿದ್ದಾಳೆ.

ಕಾರಣವೇನು?
ಮಹಿಳೆಯ ಮಗುವನ್ನು ಆಕೆಯ ಪತಿ ಕಸಿದುಕೊಂಡು ಹೋಗಿದ್ದಾನೆ. ಇದರಿಂದ ಮನನೊಂದ ಮಹಿಳೆ ಪತಿ ಕರೆದುಕೊಂಡು ಹೋಗಿದ್ದ ತನ್ನ ಮಗುವನ್ನು ವಾಪಸ್ ಕೊಡದಿದ್ದರೆ ನಾನು ಟವರ್ ಮೇಲಿಂದ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಹಿನ್ನೆಲೆ ಸೋಮವಾರ ಸಂಜೆ ಮಹಿಳೆಯು ಕೇರಳದ ಆಲಪ್ಪುಳದ ಕರಾವಳಿಯ ಕಯಂಕುಲಂನಲ್ಲಿರುವ ಬಿಎಸ್‍ಎನ್‍ಎಲ್ ಮೊಬೈಲ್ ಟವರ್ ಏರಿದ್ದಳು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಕೆಯನ್ನು ಕೆಳಗಿಳಿಯುವಂತೆ ಮನವೊಲಿಸಲು ನಡೆಸಿದ ಪ್ರಯತ್ನ ವಿಫಲವಾಯಿತು. ಇದನ್ನೂ ಓದಿ: ಪೊಲೀಸರನ್ನ ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್ ಕೂಗಿದ ವಿದ್ಯಾರ್ಥಿನಿ 

ಆದರೆ ಟವರ್‌ನಲ್ಲಿದ್ದ ಕಣಜಗಳು ಆಕೆಯನ್ನು ಸುತ್ತಿಕೊಂಡ ಕುಟುಕಲು ಪ್ರಾರಂಭಿಸುತ್ತವೆ. ಇದರಿಂದ ಗಾಬರಿಯಾದ ಮಹಿಳೆ ವೇಗವಾಗಿ ಟವರ್‌ನಿಂದ ಕೆಳಗಿಳಿಯಲು ಪ್ರಾರಂಭಿಸಿದಳು. ಆದರೆ ಕಣಜಗಳು ಆಕೆಯ ಸುತ್ತಲೂ ಹಿಂಡು-ಹಿಂಡಾಗಿ ಬಂದು ಕುಟುಕುತ್ತಿದ್ದ ಪರಿಣಾಮ ಆಕೆ ಕಿರುಚಲು ಪ್ರಾರಂಭಿಸುತ್ತಾಳೆ. ನಂತರ ಆಕೆಯ ಸಮೀಪವೇ ಅಗ್ನಿಶಾಮಕ ದಳದ ಸಿಬ್ಬಂದಿ ಭದ್ರವಾಗಿ ಸುರಕ್ಷತಾ ಜಾಲ ಹಿಡಿದುಕೊಂಡಿದ್ದು, ಆಕೆ ಅದರ ಮೇಲೆ ಹಾರಿದಳು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕಣಜಗಳು ಇಲ್ಲದೇ ಇದ್ದಿದ್ದರೆ ಆ ಮಹಿಳೆ ಕೆಳಗಿಳಿಯುತ್ತಿರಲಿಲ್ಲ. ಆಕೆ ತಮಿಳುನಾಡಿನ ನಿವಾಸಿಯಾಗಿದ್ದು, ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆಕೆಯ ಪತಿ ಮತ್ತು ಸಂಬಂಧಿಕರನ್ನು ಸಂಪರ್ಕಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಮಹಿಳೆ ಚೇತರಿಸಿಕೊಂಡ ಮೇಲೆ ಹೆಚ್ಚು ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *