ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ಬಿರಿಯಾನಿ ತಿಂದು ಕಾಸರಗೋಡು ಯುವತಿ ಸಾವು

Public TV
1 Min Read

ತಿರುವನಂತಪುರ: ಸ್ಥಳೀಯ ಹೋಟೆಲ್‌ನಿಂದ ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ಬಿರಿಯಾನಿ (Biriyani) ತಿಂದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ (Kerala) ನಡೆದಿದೆ.

ಕಾಸರಗೋಡು (Kasaragodu) ಸಮೀಪದ ಪೆರುಂಬಳದ ಅಂಜು ಶ್ರೀಪಾರ್ವತಿ ಅವರು ರೆಸ್ಟೋರೆಂಟ್‌ನಿಂದ ಆನ್‌ಲೈನ್‌ನಲ್ಲಿ ಖರೀದಿಸಿದ ‘ಕುಜಿಮಂತಿ’ ಬಿರಿಯಾನಿಯನ್ನು ಸೇವಿಸಿದ್ದರು. ನಂತರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಬೆಂಗಳೂರಲ್ಲಿ ಬಂಧನ

ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಶನಿವಾರ ಮುಂಜಾನೆ ಬಾಲಕಿ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಆಕೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಕರ್ನಾಟಕದ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಜೋಶಿಮಠದ ಬಳಿಕ ಕರ್ಣಪ್ರಯಾಗದಲ್ಲಿ ಭೂಮಿ, ಮನೆಯ ಗೋಡೆ ಬಿರುಕು – ಮುಳುಗಡೆ ಭೀತಿ, ಆತಂಕದಲ್ಲಿ ಜನ

ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಆಹಾರ ಸುರಕ್ಷತಾ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಘಟನೆ ಮತ್ತು ಯುವತಿಗೆ ನೀಡಿದ ಚಿಕಿತ್ಸೆಯ ಬಗ್ಗೆಯೂ ಡಿಎಂಒ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ಇದೇ ರೀತಿ ಕೋಝಿಕ್ಕೋಡ್‌ನ ಉಪಾಹಾರ ಗೃಹದಲ್ಲಿ ತಯಾರಿಸಿದ್ದ ಆಹಾರ ಸೇವಿಸಿ ನರ್ಸ್‌ವೊಬ್ಬರು ಸಾವಿಗೀಡಾಗಿದ್ದರು. ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ‌ ಈ ನರ್ಸ್‌ ಕರ್ತವ್ಯ ನಿರ್ವಹಿಸುತ್ತಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *