ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ

Public TV
1 Min Read

ಟಿ ಶ್ರೀನಿಧಿ ಶೆಟ್ಟಿ ‘ಹಿಟ್ 3’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಪ್ರಚಾರ ಕಾರ್ಯದ ವೇಳೆ, ಪಹಲ್ಗಾಮ್‌ನಲ್ಲಿ ನಡೆದ ಉಗ್ರರ (Pahalgam Terrorist Attack) ದಾಳಿ ಬಗ್ಗೆ ನಟಿ ಖಂಡಿಸಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಶ್ರೀನಿಧಿ (Srinidhi Shetty) ‘ಪಬ್ಲಿಕ್ ಟಿವಿ’ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:ಸಕ್ಸಸ್‌ಗಾಗಿ ಅದೃಷ್ಟ ಪರೀಕ್ಷೆಗಿಳಿದ ಸೋನಾಕ್ಷಿ ಸಿನ್ಹಾ

ಶ್ರೀನಿಧಿ ಶೆಟ್ಟಿ ಮಾತನಾಡಿ, ಈ ಥರ ವಿಚಾರದ ಬಗ್ಗೆ ಮಾತನಾಡುವ ದಿನಗಳು ಮತ್ತೆ ಬರಬಾರದು. ಇದರ ಬಗ್ಗೆ ಅಭಿಪ್ರಾಯ ಕೊಡೋ ಹಾಗೇ ಆಗಬಾರದು. ನೊಂದ ಕುಟುಂಬಗಳಿಗೆ ದೇವರು ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ. ಇದನ್ನೆಲ್ಲಾ ಮಾಡಿದವರಿಗೆ ಶಿಕ್ಷೆ ಆಗಲಿ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯುದ್ಧ ಆಗಲಿ ಅಂತ ಹೇಳೋಕೆ ನಾನ್ಯಾರು, ನಾನು ಡಿಫೆನ್ಸ್ ಅಲ್ಲಿ ಇಲ್ಲ. ಇಂತಹ ಘಟನೆ ಮತ್ತೆ ನಡೆಯಬಾರದು ಎಂದು ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ

ಅಂದಹಾಗೆ, ನಾನಿ ನಟನೆಯ ‘ಹಿಟ್ 3’ ಸಿನಿಮಾ ಮೇ 1ರಂದು ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್‌ ಆಗ್ತಿದೆ. ಈ ಸಿನಿಮಾಗೆ ಸುದೀಪ್ ಪುತ್ರಿ ಸಾನ್ವಿ ಹಾಡಿದ್ದಾರೆ. ಈ ಚಿತ್ರವನ್ನು ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ.

Share This Article