ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಜಯ್ ದತ್ ಭೇಟಿ

Public TV
1 Min Read

ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರು ದಸರಾ ಹಬ್ಬದ ಸಂದರ್ಭದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ನಯನತಾರಾ

ಆಗಾಗ ವಿವಿಧ ದೇವಾಲಯಗಳಿಗೆ ಭೇಟಿ ನೀಡುವ ಸಂಜಯ್ ದತ್ ಇದೀಗ ಮಂಗಳೂರಿನ ಕಟೀಲು ದೇವಸ್ಥಾನಕ್ಕೆ (Kateel Durgaparameshwari Temple) ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಹುಲಿ ಕುಣಿತದ ಊದು ಪೂಜೆಯಲ್ಲಿ ಸಂಜಯ್ ದತ್ ಭಾಗವಹಿಸಿದರು. ಈ ಪೂಜೆಯಲ್ಲಿ ಭಾಗವಹಿಸಲೆಂದೇ ಮುಂಬೈನಿಂದ ಮಂಗಳೂರಿಗೆ ನಟ ಆಗಮಿಸಿದ್ದಾರೆ. ಇನ್ನೂ ವೇಳೆ, ದೇವಸ್ಥಾನದ ವತಿಯಿಂದ ಸಂಜಯ್ ದತ್ ಅವರನ್ನು ದೇವರ ಶೇಷ ವಸ್ತ್ರ ಮತ್ತು ಪ್ರಸಾದ ನೀಡಿ ಗೌರವಿಸಿದರು. ಈ ವೇಳೆ, ಸಂಜಯ್ ದತ್ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದರು.

ಪ್ಯಾನ್ ಇಂಡಿಯಾ ಸಿನಿಮಾಗಳಾದ ಕೆಜಿಎಫ್ 2, ಕೆಡಿ ಸಿನಿಮಾಗಳಲ್ಲಿ ಸಂಜಯ್ ದತ್ ನಟಿಸಿದ ಬಳಿಕ ಕರ್ನಾಟಕ ಮತ್ತು ಕನ್ನಡ ಸಿನಿಮಾಗಳ ಜೊತೆ ಉತ್ತಮ ನಂಟು ಹೊಂದಿದ್ದಾರೆ.

Share This Article