ಮತ್ತೆ ಒಂದಾದ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣ

Public TV
1 Min Read

ಕೋಲಾರ: ಸಿದ್ದರಾಮಯ್ಯನವರಿಗಾಗಿ ಕಾಂಗ್ರೆಸ್ ಪಕ್ಷದ ಕೆ.ಹೆಚ್.ಮುನಿಯಪ್ಪ (KH Muniyappa) ಹಾಗೂ ರಮೇಶ್ ಕುಮಾರ್ (Ramesh Kumar) ಬಣ ಮತ್ತೆ ಒಂದಾಗಿದೆ.

ಕೋಲಾರದಲ್ಲಿ (Kolar) ಸಿದ್ದರಾಮಯ್ಯ (Siddaramaiah) ಸ್ಪರ್ಧೆಯ ವಿಚಾರವಾಗಿ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣದ ನಡುವೆ ಮಾತಿನ ಜಟಾಪಟಿ ನಡೆದಿತ್ತು. ಇದೀಗ ಸಿದ್ದರಾಮಯ್ಯನವರಿಗಾಗಿ ಬಣ ರಾಜಕಾರಣ, ಗುಂಪುಗಾರಿಕೆ ಹಾಗೂ ಭಿನ್ನಮತ ಮರೆತು ಮತ್ತೆ ಕಾಂಗ್ರೆಸ್ ನಾಯಕರು ಒಂದಾಗಿ ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದಾರೆ. ಇದನ್ನೂ ಓದಿ: `ಸತ್ಯ ಮೇವ ಜಯತೆ’ ಎಂದ ರೂಪಾ

ಮತ್ತೆ ಒಂದಾದ ಮುಖಂಡರು ಕೋಲಾರ ತಾಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ಹಳ್ಳಿ ಹಳ್ಳಿಗೆ ತೆರಳಿ ಸಿದ್ದರಾಮಯ್ಯನವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ, ಸಿದ್ದರಾಮಯ್ಯನವರ ಪರವಾಗಿ ಜಿಲ್ಲಾ ಕಾಂಗ್ರೆಸ್ ನಾಯಕರು ಕ್ಷೇತ್ರ ಪ್ರವಾಸವನ್ನೂ ಕೈಗೊಂಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಸುದರ್ಶನ್, ಪರಿಷತ್ ಸದಸ್ಯ ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಸೇರಿದಂತೆ ಅನೇಕರು ಈ ಪ್ರವಾಸದಲ್ಲಿ ಭಾಗಿಯಾಗಿದ್ದಾರೆ.

ಮುಖಂಡರು ಚಿಕ್ಕಹಸಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಸಂಘಟನೆಯನ್ನು ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: BJP ಕಾರ್ಯಕರ್ತರು ಮೈ ಮರೆತ್ರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಪ್ರತಾಪ್ ಸಿಂಹ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *