ಬೆಂಗ್ಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡ ಶಾಸಕಿ ಅಂಜಲಿ ನಿಂಬಾಳ್ಕರ್

Public TV
1 Min Read

ಬೆಳಗಾವಿ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಬೆಂಗಳೂರಿನಿಂದ ತಿರುಪತಿವರೆಗೆ ಸದ್ಭಾವನಾ ಪಾದಯಾತ್ರೆಯನ್ನು ಶನಿವಾರ ಬೆಳಗ್ಗೆ ಆರಂಭಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಾಸಕಿ ನಿಂಬಾಳ್ಕರ್ ಅವರು, ಸಶಕ್ತ ವರ್ತಮಾನ, ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥನೆ ನಡಿಗೆ. ನಮ್ಮ ಖಾನಾಪುರಕ್ಕಾಗಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಕೆಲವು ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಪತಿ, ಪೋಲಿಸ್ ಅಧಿಕಾರಿ ಐಜಿಪಿ ಹೇಮಂತ್ ನಿಂಬಾಳ್ಕರ್ ಸೇರಿದಂತೆ ತಮ್ಮ ಸಹೋದರರಾದ ಮಿಲಿಂದ್ ಮತ್ತು ಸುರೇಶ್ ಅವರೊಂದಿಗೆ ಬೆಂಗಳೂರಿನಿಂದ ತಿರುಪತಿವರೆಗೆ ಪಾದಯಾತ್ರೆ ಪ್ರಾರಂಭಿಸಿದ್ದಾರೆ. ಶನಿವಾರ ಬೆಳಗ್ಗೆ ಈ ಸದ್ಭಾವನಾ ಪಾದಯಾತ್ರೆ ಪ್ರಾರಂಭಿಸಿದ ಶಾಸಕಿ ಅಂಜಲಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಜನತೆಯ ಸುಖ ಶಾಂತಿ, ನೆಮ್ಮದಿಯ ಬದುಕಿಗಾಗಿ ತಿಮ್ಮಪ್ಪನ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *