– ಮೋದಿ ಮೇಲ್ವರ್ಗಕ್ಕೆ ಸೇರಿದ್ದರೂ ಹಿಂದುಳಿದವರು ಅಂತಾರೆ
ನವದೆಹಲಿ: ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗ ದೆಹಲಿಯಲ್ಲಿ ನಡೆಸಿದ ‘ಭಾಗೀದಾರಿ ನ್ಯಾಯ್ ಸಮ್ಮೇಳನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ, ಆರ್ಎಸ್ಎಸ್, (RSS) ಬಿಜೆಪಿ (BJP) ವಿರುದ್ಧ ಕಿಡಿಕಾರಿದ್ದಾರೆ. ಆರ್ಎಸ್ಎಸ್ ವಿಷವಿದ್ದಂತೆ. ಅದರ ರುಚಿ ನೋಡಿದ್ರೆ ಸತ್ತು ಹೋಗ್ತೀರಿ ಎಂದಿದ್ದಾರೆ.
ಆರ್ಎಸ್ಎಸ್, ಬಿಜೆಪಿ ಜನರನ್ನು ವಿಭಜನೆ ಮಾಡುತ್ತದೆ. ಇವರ ವಿರುದ್ಧ ಎಸ್ಸಿ, ಎಸ್ಟಿ ಒಬಿಸಿಯವರು ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ಕೊಟ್ಟಿದ್ದಾರೆ. ಈ ಮೂಲಕ ಕೇಸರಿ ಪಡೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ
ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೋದಿ ಮೇಲ್ಜಾತಿಯ ಸಮುದಾಯಕ್ಕೆ ಸೇರಿದವರಾಗಿದ್ದರೂ ತಮ್ಮನ್ನು ಹಿಂದುಳಿದವರು ಎಂದು ಕರೆದುಕೊಳ್ಳುತ್ತಾರೆ. ಅವರು ಮುಖ್ಯಮಂತ್ರಿಯಾದ ನಂತರವೇ ಯಾರಿಗೂ ತಿಳಿಯದಂತೆ ತಮ್ಮ ಸಮುದಾಯವನ್ನು ಹಿಂದುಳಿದವರ ಪಟ್ಟಿಗೆ ಸೇರಿಸಿದರು. ವಾಸ್ತವವಾಗಿ, ನಮ್ಮಲ್ಲಿ ಹೆಚ್ಚಿನವರಿಗೆ ಅವರು ಪ್ರಧಾನಿಯಾದ ನಂತರ ಈ ವಿಚಾರ ತಿಳಿಯಿತು ಎಂದು ಹೇಳಿದ್ದಾರೆ.
ಹಿಂದುಳಿದ ಸಮುದಾಯಗಳೊಂದಿಗೆ ತಮ್ಮನ್ನೂ ಅವರಲ್ಲಿ ಒಬ್ಬರೆಂದು ಮೋದಿ ಬಿಂಬಿಸಿಕೊಳ್ಳುತ್ತಿದ್ದರು. ಅಲ್ಲದೇ ಕಾಂಗ್ರೆಸ್ ತನಗೆ ಕಿರುಕುಳ ನೀಡುತ್ತಿದೆ ಎಂದು ಅವರು ಹೇಳಿಕೊಂಡಿದ್ದರು. ಆದರೆ ನಾವು ಯಾವಾಗ ಅವರಿಗೆ ತೊಂದರೆ ಕೊಟ್ಟೆವು? ಇದಕ್ಕೆ ವಿರುದ್ಧವಾಗಿ, ಅವರು ಎಲ್ಲರಿಗೂ ತೊಂದರೆ ಕೊಡುವವರು. ನೀವು ಎಲ್ಲರನ್ನೂ ಸಮಾಧಿ ಮಾಡಿ ಬದುಕುಳಿದ ಏಕೈಕ ವ್ಯಕ್ತಿಯಾಗಲು ಬಯಸುತ್ತೀರಿ. ಆದರೆ ಅದು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಪೂರೈಕೆಯಾಗಿದೆ, ಸಿಎಂ ಬರೀ ಸುಳ್ಳು ಹೇಳ್ತಿದ್ದಾರೆ – ಜೋಶಿ ಕಿಡಿ