ಡಿಕೆಶಿ ನಟ್ಟು ಬೋಲ್ಟು ಹೇಳಿಕೆ ಸಾಧು ಕೋಕಿಲ ಕಿತಾಪತಿ – ಕಿಚ್ಚ ಸುದೀಪ್‌

Public TV
2 Min Read

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಸುದೀಪ್ (Kichcha Sudeep) ಸುದ್ದಿಗೋಷ್ಠಿ ನಡೆಸಿ ಸಾಕಷ್ಟು ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ದರ್ಶನ್‌ ಹಾಗೂ ತಮ್ಮ ನಡುವಿನ ಸ್ನೇಹದ ಬಗ್ಗೆಯೂ ಒಂದಿಷ್ಟು ಮೆಲುಕು ಹಾಕಿದ್ದು, ಇದೇ ವೇಳೆ ಡಿಕೆ ಶಿವಕುಮಾರ್‌ ಅವರ ನಟ್ಟು ಬೋಲ್ಟು ಹೇಳಿಕೆಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸುದೀಪ್‌, ನಟ್ಟು ಬೋಲ್ಟು ಕಿತಾಪತಿ ಸಾಧು ಕೋಕಿಲ (Sadhu Kokila) ಅವರದ್ದು, ಇದ್ರಲ್ಲಿ ಡಿಕೆ ಸಾಹೇಬರದ್ದು ಏನೂ ಇಲ್ಲ ಅಂತ‌ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಾವೇನು ಚಿಕ್ಕ ಹುಡುಗರಾ? ಯಾಕೆ ದೂರಾದ್ವಿ ಅನ್ನೋದು ನಮಗೆ ಗೊತ್ತಿದೆ – ದರ್ಶನ್‌ ಬಗ್ಗೆ ಕಿಚ್ಚನ ಮಾತು

ಸಾಧು ಕೋಕಿಲ ಅವರಿ ಆಮೇಲೆ ಹೇಳ್ತಾರೆ, ಎಲ್ಲಾರನ್ನೂ ಒಟ್ಟಿಗೆ ಕರೆದ್ರೆ ನಾನು ಹೇಗೆ ಮೆಂಟೇನ್‌ ಮಾಡ್ಲಿ? ಯಾರಿಗೆ ಸೆಕ್ಯೂರಿಟಿ ಕೊಡ್ಲಿ ಅಂತಾರೆ. ಅದನ್ನ ಮೊದಲೇ ಅವರಿಗೆ ಹೇಳ್ಬೇಕು ತಾನೆ. ಅಲ್ಲಿ ಬಂದು ಹೇಳಿದಾಗ ಸೈಲೆಂಟ್‌ ಆಗಿದ್ದರು. ಇದು ಸಾಧು ಅವರದ್ದೇ ಕಿತಾಪತಿ. ವೈಯಕ್ತಿಕವಾಗಿ ಕಾರ್ಯಕ್ರಮಕ್ಕೆ ಕರೆದವರು ಬಂದಿದ್ದಾರೆ. ಕೆಲವರಿಗೆ ಬರೋಕಾಗಿಲ್ಲ. ಅಷ್ಟಕ್ಕೆ ಕೆಲವರು ದೊಡ್ಡ ದೊಡ್ಡ ಮಾತುಗಳನ್ನಾಡಿದ್ರು. ಪರ್ವಾಗಿಲ್ಲ ಅಂದರು.

ಮುಂದುವರಿದು.. ಪಾಪ ಸಾಧು ಅವರದ್ದು ಇದರಲ್ಲಿ ಏನೂ ತಪ್ಪಿಲ್ಲ. ಅವರು ತಮಾಷೆ ಮಾಡಿಕೊಂಡೇ ಇರ್ತಾರೆ. ಇದನ್ನೂ ತಮಾಷೆಯಾಗೇ ಹೇಳಿದ್ದಾರೆ. ಆದ್ರೆ ಸೀರಿಯಸ್‌ ಆಗಿಬಿಡ್ತು ಅಷ್ಟೇ ಅಂತ ಹೇಳಿದರು. ಇದನ್ನೂ ಓದಿ: ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ

ಡಿಕೆಶಿ ನಟ್ಟು ಬೋಲ್ಟು ಟೈಟ್‌ ಮಾಡೋದಾಗಿ ಹೇಳಿದ್ದೇಕೆ?
ಬೆಂಗಳೂರಲ್ಲೇ ಸಿನಿ ಕಾರ್ಯಕ್ರಮವೊಂದರಲ್ಲಿ ಡಿಕೆಶಿ ಮಾತನಾಡುವಾಗ, ಚಿತ್ರರಂಗದಲ್ಲಿ ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ. ಇದನ್ನು ವಾರ್ನಿಂಗ್ ಅಂತಾ ಆದ್ರೂ ಅಂದುಕೊಳ್ಳಿ, ಮನವಿ ಅಂತಾ ಆದ್ರೂ ಅಂದುಕೊಳ್ಳಿ. ಥಿಯೇಟರ್‌ಗೆ ಪರ್ಮಿಷನ್‌ ಕೊಡಲಿಲ್ಲಾ ಅಂದ್ರೆ ಸಿನಿಮಾನೇ ರಿಲೀಸ್‌ ಆಗಲ್ವಲ್ಲ ಅಂತ ಹೇಳಿದ್ದರು. ಈ ಹೇಳಿಕೆ ಸಿನಿಮಾರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು, ಇಡೀ ಚಿತ್ರರಂಗವೇ ದಂಗಾಗಿತ್ತು. ಆ ಸಮಯಕ್ಕೆ ಕೆಲವು ನಟ ನಟಿಯರು ಪ್ರತಿಕ್ರಿಯಿಸಿದ್ರು, ಕೆಲವರು ಡಿಕೆಶಿ ವಿರುದ್ಧ ಬೇಸರವನ್ನು ಹೊರ ಹಾಕಿದ್ರು. ಇದನ್ನೂ ಓದಿ: ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲುಗು ಸ್ಟಾರ್‌ ರಾಮ್‌ ಚರಣ್‌

Share This Article