ಕಿಚ್ಚನ ಸಿನಿ ಜರ್ನಿಗೆ 27 ವರ್ಷಗಳ ಸಂಭ್ರಮ: ವಿಶೇಷ ಪೋಸ್ಟ್ ಹಂಚಿಕೊಂಡ ಸುದೀಪ್

Public TV
2 Min Read

ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಸಿನಿಮಾಗೆ ಜರ್ನಿಗೆ 27 ವರ್ಷಗಳು ಕಳೆದಿದೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿರುವ ಸುದೀಪ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಕಿಚ್ಚ ಸಿನಿ ಜರ್ನಿಯಲ್ಲಿ ಬೆನ್ನಿಗೆ ನಿಂತ ಸಿನಿಮಾರಂಗ ಮತ್ತು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

`ತಾಯವ್ವ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಪಾದಾರ್ಪಣೆ ಮಾಡಿದ ನಟ ಸುದೀಪ್ ಬಳಿಕ ಸ್ಪರ್ಶ, ಹುಚ್ಚ, ಕಿಚ್ಚ, ಮೈ ಆಟೋಗ್ರಾಫ್, ಹೆಬ್ಬುಲಿ, ವಿಕ್ರಾಂತ್ ರೋಣ ಸೇರಿದಂತೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೇ ಬಾಲಿವುಡ್ ಮತ್ತು ಸೌತ್ ಸಿನಿಮಾರಂಗದಲ್ಲೂ ಛಾಪೂ ಮೂಡಿಸಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕಿಚ್ಚ ಸುದೀಪ್ ಅವರು, ಖಂಡಿತವಾಗಿಯೂ ಇದು ಸ್ಮರಣೀಯ ಪ್ರಯಾಣ. ಚಿತ್ರರಂಗದಲ್ಲಿ 27 ವರ್ಷಗಳ ಕಾಲ ಹಲವಾರು ಅದ್ಭುತ ಪ್ರತಿಭೆಗಳೊಂದಿಗೆ ನಾನು ಕೆಲಸ ಮಾಡಿದ್ದೇನೆ. ನನಗೆ ಸ್ಫೂರ್ತಿ ನೀಡಿದ, ನನ್ನನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಸಹಕಾರ ನೀಡಿದ ಆ ಪ್ರತಿಭೆಗಳಿಗೆ ಧನ್ಯವಾದ. ನನ್ನ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ ನನ್ನ ನಮಸ್ಕಾರ’ ಎಂದು ಸುದೀಪ್ ಹೇಳಿದ್ದಾರೆ. ಇದನ್ನೂ ಓದಿ: ಮುಖಮುಚ್ಚಿಕೊಂಡು ‘ಪಠಾಣ್’ ಸಿನಿಮಾಗೆ ಬಂದ ದೀಪಿಕಾ ಪಡುಕೋಣೆ

 

View this post on Instagram

 

A post shared by KicchaSudeepa (@kichchasudeepa)

ನನಗೆ ಅವಕಾಶ ನೀಡಿದ ಕನ್ನಡ ಚಿತ್ರರಂಗಕ್ಕೆ (Kannada Film Industry) ಧನ್ಯವಾದ. ನನ್ನ ಮೇಲೆ ನಂಬಿಕೆ ಇಟ್ಟ ಹಿಂದಿ, ತಮಿಳು ಹಾಗೂ ತೆಲುಗು ಚಿತ್ರರಂಗಕ್ಕೆ ಧನ್ಯವಾದ ಹೇಳದೇ ಇದ್ದರೆ ಅಪೂರ್ಣ ಎನಿಸುತ್ತದೆ’ ಎಂದು ಸುದೀಪ್ ಬರೆದುಕೊಂಡಿದ್ದಾರೆ. ಇದೀಗ ಕಿಚ್ಚನ ಪೋಸ್ಟ್‌ಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಈ ವೇಳೆ ನಟ ಸುದೀಪ್ ಅಭಿಮಾನಿಗಳು ಮನವಿಯೊಂದನ್ನ ಮಾಡಿದ್ದಾರೆ. `ವಿಕ್ರಾಂತ್ ರೋಣ’ ಚಿತ್ರದ ನಂತರ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಗದೇ ಇರುವ ಕಾರಣ, ಸಿನಿಮಾ ಅನೌನ್ಸ್ ಮಾಡಿ ಎಂದು ಕಿಚ್ಚನಿಗೆ ಫ್ಯಾನ್ಸ್ ಕೇಳಿದ್ದಾರೆ. ಸುದೀಪ್ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *