ಇಂದು ಚಿತ್ರೀಕರಣದಲ್ಲಿ ಭಾಗಿಯಾದ ಕಿಚ್ಚ ಸುದೀಪ್

Public TV
2 Min Read

ಚುನಾವಣೆ ಪ್ರಚಾರ ಮುಗಿಸಿಕೊಂಡು ಅಭಿಮಾನಿಗಳಿಗೆ ಮೊನ್ನೆಯಷ್ಟೇ ಗುಡ್ ನ್ಯೂಸ್ ನೀಡಿದ್ದರು ಕಿಚ್ಚ ಸುದೀಪ್. ಮೇ 22ರಂದು ಹೊಸ ಸಿನಿಮಾದ ಪ್ರೊಮೋ ಶೂಟ್ ನಲ್ಲಿ ಭಾಗಿಯಾಗುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಗೆ ತಿಳಿಸಿದ್ದರು. ಇಂದು ಕಿಚ್ಚ ಸುದೀಪ್ ಹೊಸ ಸಿನಿಮಾದ ಪ್ರೋಮೋ ಶೂಟ್ ನಲ್ಲಿ ಭಾಗಿಯಾಗಿದ್ದಾರೆ. ಈ ಸಿನಿಮಾದ ಕುರಿತಂತೆ ಜೂನ್ 1 ರಂದು ಮಾಹಿತಿ ಹಂಚಿಕೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.

ಈ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಅದಕ್ಕೂ ಒಂದಷ್ಟು ಮಾಹಿತಿ ಸಿಕ್ಕಿದೆ. ಕೈಯಲ್ಲಿರುವ ಮೂರು ಸಿನಿಮಾಗಳಲ್ಲಿ ಮೊದಲ ಶುರುವಾಗುವ ಚಿತ್ರದ ಬಗ್ಗೆ ಅವರು ಆಪ್ತರು ಕೆಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಪವಿತ್ರಾ ಜೊತೆಗಿನ ಸಂಬಂಧಕ್ಕೆ ಗ್ರೀನ್ ಸಿಗ್ನಲ್ ಕೊಟ್ರಿದ್ರಾ ಕೃಷ್ಣ, ಮಹೇಶ್ ಬಾಬು- ನರೇಶ್ ಹೇಳೋದೇನು?

ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೊಮೋ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.

ನಂತರದ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದರು. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ.

ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

Share This Article