ಕೊಲೆ ಮಾಡಿ, ಶವವನ್ನು ಗೋಣಿ ಚೀಲಕ್ಕೆ ತುಂಬಿ ಕಾಲುವೆಗೆ ಹಾಕಿದ್ರು!

Public TV
0 Min Read

ಮಂಗಳೂರು: ಸುರತ್ಕಲ್‍ದ ಚೊಕ್ಕಬೆಟ್ಟು ಸೇತುವೆ ಕೆಳಗೆ ಗೋಣಿ ಚೀಲದಲ್ಲಿ ಶವವೊಂದು ಪತ್ತೆಯಾಗಿದ್ದು, ಕಾಲುವೆ ಮೂಲಕ ಶವ ಹರಿದು ಬಂದಿದೆ ಎನ್ನಲಾಗಿದೆ.

ಕೊಪ್ಪಳ ಜಿಲ್ಲೆಯ ಕಬ್ಬರಗಿ ನಿವಾಸಿ ಮರಿಯಪ್ಪ (50) ಶವವಾಗಿ ಪತ್ತೆಯಾಗಿದ್ದಾರೆ. ಮರಿಯಪ್ಪನನ್ನು ಬರ್ಬರವಾಗಿ ಹಲ್ಲೆ ಮಾಡಿ, ಕೊಂದು ಗೋಣಿಚೀಲದಲ್ಲಿ ಹಾಕಿ ಕಾಲುವೆಗೆ ಎಸೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮಂಗಳೂರಿನ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *