ಯಶ್ ಅಭಿನಯದ ಕಿರಾತಕ ಚಿತ್ರದ ನಿರ್ದೇಶಕ ಪ್ರದೀಪ್ ರಾಜ್ ನಿಧನ

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಿರಾತಕ’ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್(46) ಇಂದು ನಿಧನರಾಗಿದ್ದಾರೆ.

ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಅವರು ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಕುರಿತು ಪ್ರದೀಪ್ ರಾಜ್ ಸಹೋದರ ಪ್ರಶಾಂತ್, ತನ್ನ ಸಹೋದರ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಯಶ್ ಅಭಿನಯದ ಕಿರಾತಕ ಸಿನಿಮಾ ಪ್ರದೀಪ್ ರಾಜ್ ಗೆ ದೊಡ್ಡ ಹೆಸರು ತಂದುಕೊಟ್ಟಿತ್ತು. ಬಳಿಕ ದುನಿಯಾ ವಿಜಯ್ ಗೆ ರಜನಿಕಾಂತ, ಸತೀಶ್ ಅಭಿನಯದ ಅಂಜದ ಗಂಡು, ಗಣೇಶ್ ಗೆ ಮಿಸ್ಟರ್ 420, ಬೆಂಗಳೂರು 23 ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಸದ್ಯ ಕಿರಾತಕ -2 ಸಿನಿಮಾ ರಿಲೀಸ್ ಗೆ ರೆಡಿ ಇದೆ. ಇದನ್ನೂ ಓದಿ: ದೇಶದ ಮೊದಲ ಪ್ಯಾರಾ ಬ್ಯಾಡ್ಮಿಂಟನ್ ಅಕಾಡೆಮಿ ಸ್ಥಾಪನೆ

ಪಾಂಡಿಚೆರಿಯಲ್ಲಿ ಇಂದು ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನೆರವೇರಿಸೋಕೆ ಕುಟುಂಬ ತೀರ್ಮಾನಿಸಿದೆ. ಪ್ರದೀಪ್ ರಾಜ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನ ‘ನಾನು ಹುಡುಗಿ ಹೋರಾಡಬಲ್ಲೆ’ ಪೋಸ್ಟರ್ ಖ್ಯಾತಿಯ ಪ್ರಿಯಾಂಕಾ ಬಿಜೆಪಿಗೆ?

Share This Article
Leave a Comment

Leave a Reply

Your email address will not be published. Required fields are marked *