ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಕಿರಿಕ್ ತಂಡ!

Public TV
1 Min Read

ರಾಯಚೂರು: ಕನ್ನಡ ಚಿತ್ರರಂಗದಲ್ಲಿ ಅದ್ಧೂರಿಯಾಗಿ ಯಶಸ್ಸು ಕಂಡ `ಕಿರಿಕ್ ಪಾರ್ಟಿ’ ಚಿತ್ರತಂಡ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿದೆ. ಕಿರಿಕ್ ಪಾರ್ಟಿ ಚಿತ್ರದ ನಾಯಕ ನಟ ರಕ್ಷಿತ್ ಶೆಟ್ಟಿ ಹಾಗೂ ನಾಯಕಿ ರಶ್ಮಿಕಾ ಮಂದಣ್ಣ ರಾಯರ ದರ್ಶನ ಪಡೆದ್ರು.

ಇದೇ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ, ನಟ ಪ್ರಮೋದ್ ಶೆಟ್ಟಿ, ತಂತ್ರಜ್ಞರು ಸೇರಿ ಮತ್ತಿತರರು ರಾಯರ ದರ್ಶನ ಪಡೆಯುವ ಜೊತೆಗೆ ಸುಬುಧೇಂದ್ರ ತೀರ್ಥ ಶ್ರೀಗಳ ಆರ್ಶೀವಾದ ಪಡೆದ್ರು.

ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆಯಲಿರುವ ಮಹಿಳೆಯರ ವಿಶ್ವ ಕಪ್ ಕ್ರಿಕೆಟ್ ಫೈನಲ್ ನಲ್ಲಿ ಭಾರತ ತಂಡ ಗೆದ್ದು ಬರಲಿ ಅಂತ ಇಡೀ ಭಾರತವೇ ಹಾರೈಸುತ್ತಿದೆ. ಹೀಗಾಗಿ ಮಂತ್ರಾಲಯದಲ್ಲಿ ನಟಿ ರಶ್ಮಿಕಾ, ಶೀತಲ್ ಶೆಟ್ಟಿ ಹಾಗೂ ಮತ್ತಿತರ ಸಿನಿ ತಾರೆಯರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಶುಭಹಾರೈಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *