ರಾಷ್ಟ್ರಮಟ್ಟದ ಗಾಳಿಪಟ ಉತ್ಸವ – ಬಾನಂಗಳದಲ್ಲಿ ಹಾರಲಿದೆ ಹರ್ಷ ಗಾಳಿಪಟ

Public TV
1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯ ಗಾಳಿಪಟ ಕಲಾಸಂಘದ 15ನೇ ವಾರ್ಷಿಕೋತ್ಸವದ ಅಂಗವಾಗಿ ಜುಲೈ 17 ರಂದು ರಾಷ್ಟ್ರಮಟ್ಟದ ಗಾಳಿಪಟ ಉತ್ಸವ ಮತ್ತು ಜುಲೈ 18 ರಂದು ಗಾಳಿಪಟ ಸ್ಪರ್ಧೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಗಾಳಿಪಟ ಉತ್ಸವದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಗಾಳಿ ಪಾಟ ಬಾನಿಗೇರಲಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡದಿಂದ ಹರ್ಷ ಭಾವಚಿತ್ರವುಳ್ಳ ಗಾಳಿಪಟವನ್ನು ತಯಾರಿಸಲಾಗಿದ್ದು, ಗಾಳಿಪಟ ಉತ್ಸವದಲ್ಲಿ ಮುಗಿಲೆತ್ತರಕ್ಕೆ ಹಾರಿಸಿ ಶ್ರದ್ಧಾಂಜಲಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಇದನ್ನೂ ಓದಿ: ಬೆಳಿಗ್ಗೆ 7 ಗಂಟೆಗೆ ಮಕ್ಕಳು ಶಾಲೆಗೆ ಹೋಗ್ಬೋದಾದ್ರೆ, ನ್ಯಾಯಾಧೀಶರೇಕೆ 9 ಗಂಟೆಗೆ ಬರಬಾರದು – ಯು.ಯು.ಲಲಿತ್ ಪ್ರಶ್ನೆ

ನಗರದ ಕಲಾಸಿಪಾಳ್ಯ ನಿವಾಸಿ ಹವ್ಯಾಸಿ ಕಲಾವಿದ ನಿಶ್ಚಿತ್ ಗಾಳಿಪಟದ ಮೇಲೆ ಹರ್ಷ ಅವರ ಭಾವ ಚಿತ್ರವನ್ನು ಚಿತ್ರಿಸಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೆಬ್ರವರಿ 20 ರಂದು ಬಜರಂಗದಳ ಕಾರ್ಯಕರ್ತ ಹರ್ಷ(28)ರನ್ನು ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಬಳಿ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಇದನ್ನೂ ಓದಿ: ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ: ಡಿ.ಕೆ ಶಿವಕುಮಾರ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *