ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ – ಸರ್ಕಾರದಲ್ಲಿ ದಲಿತ ಮಂತ್ರಿಗೆ ರಕ್ಷಣೆ ಇಲ್ಲ: ಅಶೋಕ್‌

Public TV
1 Min Read

ಬೆಂಗಳೂರು: ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ (Honeytrap) ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ (R Ashok) ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸಭಾ ಕಲಾಪ ಮುಂದೂಡಿದ ಬಳಿಕ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣ (Rajanna) ಸಾಮಾನ್ಯ ವ್ಯಕ್ತಿಯಲ್ಲ. ಅವರು ಸರ್ಕಾರದ ಮಂತ್ರಿಯಾಗಿದ್ದಾರೆ. ಅವರೇ ಸದನದಲ್ಲಿ ಆರೋಪ ಮಾಡಿದ್ದಾರೆ. ಈ ಸರ್ಕಾರದಲ್ಲಿ ದಲಿತ ಮಂತ್ರಿಗಳಿಗೆ ರಕ್ಷಣೆ ಇಲ್ಲ ಎಂದು ಕಿಡಿಕಾರಿದರು.

 

ರಾಜಣ್ಣ ಅವರೇ ಸದನದಲ್ಲಿ 48 ಜನರ ಮೇಲೆ ಹನಿಟ್ರ‍್ಯಾಪ್ ಆಗಿದೆ ಅಂದಿದ್ದಾರೆ. ಈ ಆರೋಪಕ್ಕೆ ಸಿಎಂ ಸರಿಯಾಗಿ ಉತ್ತರ ನೀಡಿಲ್ಲ. ಇದು ಗಂಭೀರ ಪ್ರಕರಣ, ಎಲ್ಲ ಶಾಸಕರ, ಸದನದ, ರಾಜ್ಯದ ಗೌರವದ ಪ್ರಶ್ನೆ. ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಹನಿಟ್ರ‍್ಯಾಪ್ ವಿಚಾರ ಸದನದಲ್ಲಿ ಪ್ರಸ್ತಾಪ ಆಗಿದ್ದು ಒಂದು ಗ್ಯಾಂಗ್‌ ಮಾಡಿದೆ ಎಂದು ಹೇಳಿದ್ದಾರೆ. ಏನಿದು ಕಳ್ಳಾಟ ನಡೆಯುತ್ತಿದ್ಯಾ? ರಾಜಣ್ಣ ಹೇಳಿಕೆ ಸದನದ ಆಸ್ತಿ ಎಂದರು.

Share This Article