ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ – ಸರ್ಕಾರದಲ್ಲಿ ದಲಿತ ಮಂತ್ರಿಗೆ ರಕ್ಷಣೆ ಇಲ್ಲ: ಅಶೋಕ್‌

By
1 Min Read

ಬೆಂಗಳೂರು: ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ (Honeytrap) ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ (R Ashok) ಗಂಭೀರ ಆರೋಪ ಮಾಡಿದ್ದಾರೆ.

- Advertisement -

ವಿಧಾನಸಭಾ ಕಲಾಪ ಮುಂದೂಡಿದ ಬಳಿಕ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣ (Rajanna) ಸಾಮಾನ್ಯ ವ್ಯಕ್ತಿಯಲ್ಲ. ಅವರು ಸರ್ಕಾರದ ಮಂತ್ರಿಯಾಗಿದ್ದಾರೆ. ಅವರೇ ಸದನದಲ್ಲಿ ಆರೋಪ ಮಾಡಿದ್ದಾರೆ. ಈ ಸರ್ಕಾರದಲ್ಲಿ ದಲಿತ ಮಂತ್ರಿಗಳಿಗೆ ರಕ್ಷಣೆ ಇಲ್ಲ ಎಂದು ಕಿಡಿಕಾರಿದರು.

- Advertisement -

 

- Advertisement -

ರಾಜಣ್ಣ ಅವರೇ ಸದನದಲ್ಲಿ 48 ಜನರ ಮೇಲೆ ಹನಿಟ್ರ‍್ಯಾಪ್ ಆಗಿದೆ ಅಂದಿದ್ದಾರೆ. ಈ ಆರೋಪಕ್ಕೆ ಸಿಎಂ ಸರಿಯಾಗಿ ಉತ್ತರ ನೀಡಿಲ್ಲ. ಇದು ಗಂಭೀರ ಪ್ರಕರಣ, ಎಲ್ಲ ಶಾಸಕರ, ಸದನದ, ರಾಜ್ಯದ ಗೌರವದ ಪ್ರಶ್ನೆ. ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

- Advertisement -

ಹನಿಟ್ರ‍್ಯಾಪ್ ವಿಚಾರ ಸದನದಲ್ಲಿ ಪ್ರಸ್ತಾಪ ಆಗಿದ್ದು ಒಂದು ಗ್ಯಾಂಗ್‌ ಮಾಡಿದೆ ಎಂದು ಹೇಳಿದ್ದಾರೆ. ಏನಿದು ಕಳ್ಳಾಟ ನಡೆಯುತ್ತಿದ್ಯಾ? ರಾಜಣ್ಣ ಹೇಳಿಕೆ ಸದನದ ಆಸ್ತಿ ಎಂದರು.

Share This Article