ಭೀಕರ ಅಪಘಾತ – ಸ್ಥಳದಲ್ಲೇ ಕೊಡಗಿನ ಬಿಜೆಪಿ ಮುಖಂಡ ಸಾವು

Public TV
1 Min Read

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೊಡಗು ಸಂಪಾಜೆಯ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಚಂದ್ರ ಕಳಗಿ(47) ಮೃತಪಟ್ಟಿದ್ದಾರೆ.

ಮಂಗಳವಾರ ಸಂಜೆ ಓಮ್ನಿ ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಬಾಲಚಂದ್ರ ಕಳಗಿ ಸ್ಥಳದಲ್ಲೇ ಸಾವು ಸಾವನ್ನಪ್ಪಿದ್ದಾರೆ. ಮಡಿಕೇರಿ ಜಿಲ್ಲಾಸ್ಪತ್ರೆಗೆ ಶವವನ್ನು ರವಾನೆ ಮಾಡಲಾಗಿದೆ. ಅಪಘಾತವಾದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಬಾಲಚಂದ್ರ ಅವರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂಭಾಗ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಆಸ್ಪತ್ರೆಗೆ ಸಂಸದ ಪ್ರತಾಪ್ ಸಿಂಹ ಮತ್ತು ವಿರಾಜಪೇಟೆ ಶಾಸಕ ಬೋಪಯ್ಯ ಅವರು ಆಗಮಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಜಿಲ್ಲೆಯಲ್ಲಿ ನಡೆಯಬೇಕಿದ್ದ ಬಿಜೆಪಿಯ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *