ಲಾರಿಗೆ ಡಿಕ್ಕಿ ಹೊಡೆದ ಕಾರು -ಬೆಂಗ್ಳೂರು ಮೂಲದ ಇಬ್ಬರ ದುರ್ಮರಣ

Public TV
0 Min Read

ಕೊಡಗು: ಕಾರು, ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪದ ಬಾಳೆಕಾಡು ಬಳಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ 23 ವರ್ಷದ ಕಿರಣ್ ಮತ್ತು 25 ವರ್ಷದ ಶ್ರವಣ್ ಎಂದು ಗುರುತಿಸಲಾಗಿದೆ. ರಾಜು ಮತ್ತು ಪುಟ್ಟೇಗೌಡ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.

4 ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಗ್ಯಾಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *