ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

Public TV
1 Min Read

ಶಿವಮೊಗ್ಗ: ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾ ಮಾಡಲಾಗಿದೆ.

ಇಂದು ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ನಡೆದ ರಾಜ್ಯ ರೈತ ಸಂಘದ ತುರ್ತು ಸಭೆಯಲ್ಲಿ ಈ ತೀರ್ಮಾನವನ್ನು ತೆಗದುಕೊಳ್ಳಲಾಗಿದೆ. ಸಭೆಯಲ್ಲಿ ರೈತರು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಕೋಡಿಹಳ್ಳಿ ವಜಾ ಮಾಡಲು ಆಗ್ರಹಿಸಿದರು.

ಹಸಿರು ಟವೆಲ್ ತಿರುಗಿಸಿ ಕೋಡಿಹಳ್ಳಿ ಚಂದ್ರಶೇಖರ್ ವಜಾ ಮಾಡುವಂತೆ ಆಕ್ರೋಶ ಹೊರಹಾಕಿದರು. ಅಂತೆಯೇ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಿ ನೂತನ ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡಲಾಯಿತು. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ಅಣಕು ಶವಯಾತ್ರೆ ನಡೆಸಿ ಕರವೇ ಪ್ರತಿಭಟನೆ

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಆಯ್ಕೆಯಾಗಿದ್ದಾರೆ. ರೈತ ಸಂಘ ಒಮ್ಮತದಿಂದ ತೀರ್ಮಾನಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *