ಶಾಸಕರು ರೆಸಾರ್ಟಿನಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

Public TV
1 Min Read

ರಾಯಚೂರು: ರಾಜ್ಯದ ಶಾಸಕರು ರೆಸಾರ್ಟಿನಲ್ಲಿ ತೋರಿರುವ ವರ್ತನೆಯಿಂದ ರಾಜ್ಯಕ್ಕೆ ಅಪಮಾನವಾಗಿದೆ. ಇನ್ನು ಮುಂದೆ ಶಾಸಕರು ರೆಸಾರ್ಟಿನಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಸೆಗಣಿ ಮುಖಕ್ಕೆ ಎರಚಿ ಪ್ರತಿಭಟನೆ ಮಾಡುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಆದರೆ ರಾಜಕೀಯ ಪಕ್ಷಗಳಿಗೆ ಇಂತಹ ಅಪಮಾನ ಯಾವುದೇ ಆಗುವುದಿಲ್ಲ. ವಿಧಾನಸೌಧ ಸೇರಿದಂತೆ ಅನೇಕ ಸಭಾಂಗಣಗಳಿದ್ದರೂ, ರೆಸಾರ್ಟಿನಲ್ಲಿ ಏನು ಚರ್ಚೆ ಮಾಡುತ್ತಾರೆ. ರಾಜಕೀಯಕ್ಕಾಗಿ ರೆಸಾರ್ಟ್ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸೆಗಣಿ ಬಳಿಯಲಿದ್ದಾರೆ. ಈ ಮೂಲಕ ಇಂತಹ ಸಭೆಗಳಿಗೆ ಇತಿಶ್ರೀ ಹಾಡುತ್ತೇವೆ ಎಂದರು.

ಸಿಎಂ ಕುಮಾರಸ್ವಾಮಿ ಅವರೊಂದಿಗೆ ನಾಳೆ ರೈತ ಸಂಘಟನೆಗಳ ಬಜೆಟ್ ಪೂರ್ವ ಸಭೆ ನಿಗದಿಯಾಗಿದೆ. ಮುಂದಿನ ಬಜೆಟ್‍ನಲ್ಲಿ ರೈತರ ಪರ ವಿಚಾರಗಳ ಸೇರ್ಪಡೆಗೆ ಒತ್ತಾಯಿಸಲು ನಿರ್ಧಾರ ಮಾಡಿರುವುದಾಗಿ ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *