ಮೇಕೆದಾಟು ವಿಚಾರದಲ್ಲಿ ಎರಡು ಪಕ್ಷಗಳು ರಾಜಕೀಯ ಮಾಡ್ತಿದೆ: ಕೋಡಿಹಳ್ಳಿ ಚಂದ್ರಶೇಖರ್

Public TV
2 Min Read

ಕೋಲಾರ: ಮೇಕೆದಾಟು ವಿಚಾರದಲ್ಲಿ ಎರಡು ಪಕ್ಷಗಳು ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್‍ಗೆ ನೈತಿಕತೆ ಇದ್ದಿದ್ದರೆ ಅವರ ಸರ್ಕಾರ ಇದ್ದಾಗ ಮಾಡಬಹುದಿತ್ತು. ಇಚ್ಚಾ ಶಕ್ತಿ ಇಲ್ಲದೇ ಮಾಡುವ ಕೆಲಸ ಇದಾಗಿದೆ.

ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ಸದ್ಯ ರಾಜಕೀಯ ನಡೆಯುತ್ತಿದೆ. ಎರಡು ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಮೇಕೆದಾಟು ಪಾದಯಾತ್ರೆ ಅದೊಂದು ರಾಜಕೀಯ ಕಾರ್ಯಕ್ರಮ. ಅವರಿಗೆ ನೈತಿಕತೆ ಇದ್ದಿದ್ದರೆ ಅವರದೇ ಸರ್ಕಾರ ಇದ್ದಾಗ ಮಾಡಬಹುದಿತ್ತು. ಇಚ್ಚಾ ಶಕ್ತಿ ಇಲ್ಲದೇ ಮಾಡುವ ಕೆಲಸ ಇದಾಗಿದೆ. ಸಿದ್ದರಾಮಯ್ಯ ಆಗಲಿ ಡಿಕೆಶಿ ಆಗಲಿ ಪಾದಯಾತ್ರೆ ಮಾಡಲಿ ಕೋವಿಡ್ ನೀತಿ ನಿಯಮಗಳನ್ನು ಪಾಲನೆ ಮಾಡಬೇಕು. ಮೇಕೆದಾಟು ಪಾದಯಾತ್ರೆಗೆ ನನ್ನನ್ನು ಆಹ್ವಾನ ಮಾಡಿದ್ದರು. ಆದರೆ ಅದೊಂದು ರಾಜಕೀಯ ಪಕ್ಷದ ಅಜೆಂಡಾ ಎಂದು ಹೇಳಿದ್ದಾರೆ. ದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ

 

ನಿನ್ನೆ ಪಂಜಾಬ್‍ನಲ್ಲಿ ಪ್ರಧಾನಿ ಮೋದಿ ಅವರಿಗೆ ರೈತರ ಪ್ರತಿಭಟನೆ ಬಿಸಿ ತಟ್ಟಿದೆ. ಆದರೆ ಬಿಜೆಪಿ ಅವರು ಒಂದು ರಾಜ್ಯದ ಮೇಲೆ ಗುರುತರವಾದ ಆರೋಪ ಮಾಡಲಾಗುತ್ತಿದೆ. ಅವರನ್ನು ಖಾಲಿ ಸ್ಥಾನಿಗಳು, ಉಗ್ರ ಗಾಮಿಗಳ ಬೆಂಬಲ ಇದೆ ಎನ್ನುವುದು ಸರಿಯಲ್ಲ. ನಾವ್ಯಾರು ಮಾಡದ ತಪ್ಪನ್ನು ನಮ್ಮ ಮೇಲೆ ಹೊರೆಸಿದ್ದಾರೆ. ದೆಹಲಿಯಲ್ಲಿ ಕೆಂಪುಕೋಟೆ ಮೇಲೆ ರಾಷ್ಟ್ರ ಧ್ವಜ ಕಿತ್ತಾಕಿ ನಿಂದನೆ ಹೊರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಪದೇ, ಪದೇ ಬಿಜೆಪಿ ಅವರು ಆರೋಪ ಮಾಡುತ್ತಲೇ ಇದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

ಪ್ರಧಾನಿ ಮೋದಿ ಅವರು ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದಿರುವುದು ಸಂತೋಷ. ಆದರೆ ರಾಜ್ಯ ಸರ್ಕಾರ ಅದನ್ನು ವಾಪಸ್ ಪಡೆದಿಲ್ಲ. ಮುಖ್ಯಮಂತ್ರಿಗಳು ಅಧಿವೇಶನ ಮಾಡಿ ಚರ್ಚೆ ಮಾಡಿ ವಾಪಸ್ ಪಡೆಯುತ್ತೇವೆ. ವಿಧಾನ ಸಭೆ, ಪಾರ್ಲಿಮೆಂಟ್ ನಲ್ಲಿ ಚರ್ಚೆ ಮಾಡದೇ ದೇಶದ ಉದ್ದಗಲಕ್ಕೂ ಇರುವ ರೈತರ ಮೇಲೆ ಕಾನೂನು ರೂಪಿಸಲು ಮುಂದಾಗಿದ್ದರು. 1961ರಿಂದಲೂ ಇರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳನ್ನು ಜಾರಿ ಮಾಡಿ ಕೃಷಿಯನ್ನು ಅತಂತ್ರ ಪರಿಸ್ಥಿತಿಗೆ ತಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ. ಈಗಾಗಲೇ ಸರ್ಕಾರ ಕೋವಿಡ್ ಹೊಸ ಮಾರ್ಗ ಸೂಚಿಗಳನ್ನು ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ರೈತರಿಗೆ ವಿನಾಯಿತಿ ನೀಡಬೇಕು. ಹಣ್ಣು, ತರಕಾರಿ, ಹೂ ಸರಬರಾಜು ಮಾಡುವ ರೈತರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರೈತರ ಬೆಳೆಗಳಿಗೆ ಮುಕ್ತವಾಗಿ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡಿ. ಈ ಹಿಂದೆ ಯಡಿಯೂರಪ್ಪ ಅವರಿಗೂ ಮನವಿ ಮಾಡಿದ್ವಿ. ಅದರಂತೆ ಸದ್ಯದ ಸರ್ಕಾರಕ್ಕೂ ರೈತರಿಗೆ ವಿಶೇಷ ವಿನಾಯಿತಿ ನೀಡುವಂತೆ ಮನವಿ ಮಾಡುತ್ತೇವೆ. ರೈತರಿಗೆ ಹಾಲಿನ ಬೆಲೆ ಕಡಿಮೆ ನೀಡಲಾಗುತ್ತಿದೆ. ಸಬ್ಸಿಡಿ ಕೊಡುವುದನ್ನು ಬಿಟ್ಟು ಮಾನದಂಡದ ಆಧಾರದ ಮೇಲೆ ಬೆಲೆ ನಿಗದಿ ಮಾಡಿ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕಡಿಮೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *