ಬೆಂಗಳೂರು: ಕೋಗಿಲು ಲೇಔಟ್ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಾಸಿಂ ಬೇಗ್, ವಿಜಯ್ ಕುಮಾರ್ ಬಂಧಿತ ಆರೋಪಿಗಳು. ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ 192(ಎ)(1), 192(ಬಿ), ಕೆ. ಎಲ್ ಆರ್ ಆಕ್ಟ್, ಭೂ ಕಬಳಿಕೆ ನಿಷೇಧ ರೀತ್ಯಾ ಪ್ರಕರಣ ದಾಖಲಾಗಿತ್ತು.

