ಬೋನಿಗೆ ಬಿದ್ದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ

Public TV
1 Min Read

ಕೊಪ್ಪಳ: ಜಿಲ್ಲೆಯ ಸುತ್ತಮುತ್ತ ಹಳ್ಳಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ ಇಂದು ಅರಣ್ಯ ಇಲಾಖೆ ಹಾಕಿದ್ದ ಬೋನಿಗೆ ಬಿದ್ದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿ 17 ವರ್ಷದ ಕರಡಿ ಬೋನಿಗೆ ಬಿದ್ದಿದೆ. ಕಳೆದ ಒಂದು ತಿಂಗಳಿನಿಂದ ಹನುಮನಹಳ್ಳಿ, ಚಿಕ್ಕರಾಂಪೂರ, ಪಂಪಾ ಸರೋವರ, ಜಂಗ್ಲಿ ಮತ್ತು ವಿರೂಪಾಪೂರಗಡ್ಡಿ ಗ್ರಾಮಗಳ ಸುತ್ತ ತಿರುಗಾಡಿ ಕರಡಿ ಜನರಲ್ಲಿ ಭಯ ಹುಟ್ಟಿಸಿತ್ತು.

ಆನೆಗೊಂದಿ ಸುತ್ತಲು ಬಾಳೆ ಬೆಳೆ ಬೆಳೆಯುವುದರಿಂದ ಇಲ್ಲಿ ಕರಡಿಗಳು ಹೆಚ್ಚಿವೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ದೂರು ನೀಡಿದ್ದರು. ಈ ಸಂಬಂಧ ಅರಣ್ಯ ಇಲಾಖೆ ಹಾಕಿದ್ದ ಬೋನಿಗೆ ಇಂದು ಬೆಳಗ್ಗೆ ಕರಡಿ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *