ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು – ಶಾಸಕ ಕೊತ್ತೂರು ಮಂಜುನಾಥ್

Public TV
1 Min Read

ಕೋಲಾರ: ಧರ್ಮ (Religion) ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು, ಆ ಧರ್ಮ, ಈ ಧರ್ಮ ಅಂತ ಹೇಳುವವರನ್ನ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ವಿರುದ್ಧ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ (Kotturu Manjunath) ವಾಗ್ದಾಳಿ ನಡೆಸಿದ್ದಾರೆ.

ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು. ಉದಯನಿಧಿ (Udhayanidhi Stalin) ಅವರಿಗೆ ದುಡ್ಡು ಜಾಸ್ತಿಯಾಗಿ ಮೆಂಟಲ್ ಆಗಿದ್ದಾರೆ. ಅವನಿಗೆ ಎರಡೂ ಮೂರು ಹುಚ್ಚು ನಾಯಿ ಕಚ್ಚಿದೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಗ್ಗತ್ತಲ ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ – ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವು

ನಾವು ಇರೋದು ಭಾರತ ದೇಶದಲ್ಲಿ ಯಾರು ಯಾವ ಧರ್ಮವನ್ನ ಯಾರು ಬೇಕಾದ್ರು ಪಾಲನೆ ಮಾಡಲಿ, ನಿನ್ನ ಧರ್ಮವನ್ನ ನೀನು ಪಾಲನೆ ಮಾಡು. ನನ್ನ ಧರ್ಮವನ್ನ ಪಾಲನೆ ಮಾಡಬೇಡ ಎನ್ನುವುದಕ್ಕೆ ಯಾರಿಗೂ ಹಕ್ಕಿಲ್ಲ ನನ್ನ ಧರ್ಮವನ್ನ ಇಲ್ಲ ಎಂದು ಹೇಳುವುದಕ್ಕೆ ನೀನ್ಯಾರು? ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸೌಹಾರ್ದಯುತ ಈದ್ ಮಿಲಾದ್ ಹಬ್ಬದಂದೇ ಕಿಡಿಗೇಡಿಗಳು ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ: ಉಮೇಶ್ ಜಾಧವ್

ಇದೇ ವೇಳೆ ತಮಿಳು ನಟ ರಜಿನಿಕಾಂತ್‌ ಅವರನ್ನ ಉದಾಹರಣೆ ನೀಡಿ ನಾನೇನಾದ್ರು ಮೋರಿಯಲ್ಲಿ ಬಿದ್ದು ಎದ್ದರೇ ಅದು ಬೇರೆ ಅರ್ಥ ಬರುತ್ತೆ. ಇವನಿಗೆ ನಾಯಿ ಕಚ್ಚಿದೆ ಅಂತಾರೆ. ಅದೇ ಕೆಲಸ ಸೂಪರ್ ಸ್ಟಾರ್ ರಜನಿಕಾಂತ್ ಮಾಡಿದ್ರೆ ಸೂಪರ್ ಅಂತಾರೆ. ಹಾಗೆಯೇ ಧರ್ಮದ ವಿಚಾರವಾಗಿ ಮೋರಿಯಲ್ಲಿ ಬಿದ್ದಂತ್ತಾಗಿದೆ ಎಂದು ತಮಿಳುನಾಡು ಸಚಿವರ ವಿರುದ್ಧ ಹರಿಹಾಯ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್