ಶ್ರೀನಿವಾಸ್ ಹತ್ಯೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಗುಂಡೇಟು

By
1 Min Read

ಕೋಲಾರ: ಕಾಂಗ್ರೆಸ್ (Congress) ಮುಖಂಡ ಕೌನ್ಸಿಲರ್ ಶ್ರೀನಿವಾಸ್ (shrinivas) ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕರೆತರುವ ವೇಳೆ ಪೊಲೀಸರ (Police) ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ವೇಮಗಲ್ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ವೆಂಕಟೇಶ್ ಗುಂಡು ಹಾರಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಲಕ್ಷ್ಮೀಸಾಗರ ಅರಣ್ಯ ಪ್ರದೇಶದ ಬಳಿ ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಇಬ್ಬರ ಕಾಲಿಗೆ ಗುಂಡು ಹಾರಿಸಲಾಗಿದೆ. ಈ ವೇಳೆ ಮತ್ತೊಬ್ಬ ಆರೋಪಿ ಸಂತೋಷ್‍ಗೂ ಗಾಯವಾಗಿದೆ. ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ ಬರ್ಬರ ಹತ್ಯೆ

ಆರೋಪಿಗಳು ನಡೆಸಿದ ಹಲ್ಲೆಯಿಂದ ಇನ್ಸ್‌ಪೆಕ್ಟರ್ ವೆಂಕಟೇಶ್, ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ದುಷ್ಕರ್ಮಿಗಳು ಪರಿಚಯಸ್ಥರಂತೆ ಮಾತಾಡಿಸಿ ಚಾಕು ಇರಿದು ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರ ಪೈಕಿ ಮೂವರು ಜನ ಪ್ರಮುಖ ಆರೋಪಿಗಳ ಬಂಧನವಾಗಿದೆ. ಇದನ್ನೂ ಓದಿ: ಮಹಿಳೆಯ ಹಸ್ತಕ್ಷೇಪದಿಂದ ಇಕ್ಕಟ್ಟಿಗೆ ಸರ್ಕಾರ – ದೇವರಗುಡ್ಡದ ಐತಿಹಾಸಿಕ ಕಾರ್ಣಿಕ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್