ಎಚ್‍ಡಿಕೆ ದೂರವಾಣಿ ಕದ್ದಾಲಿಕೆ ಮಾಡುವಂತಹ ವ್ಯಕ್ತಿ ಅಲ್ಲ- ಜೆಡಿಎಸ್ ಶಾಸಕ ಶ್ರೀನಿವಾಸಗೌಡ

Public TV
1 Min Read

ಕೋಲಾರ: ಮಾಜಿ ಸಿಎಂ ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡುವಂತಹ ವ್ಯಕ್ತಿ ಅಲ್ಲ, ಆ ಮಟ್ಟಕ್ಕೆ ಹೋಗುವವರು ಅವರಲ್ಲ ಎಂದು ಕೋಲಾರದಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹೆಚ್‍ಡಿಕೆ ಪರ ಬ್ಯಾಟಿಂಗ್ ಮಾಡಿದ್ದಾರೆ.

ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಕೆ ಮಾಡಿದರೆ ತಪ್ಪಾಗುತ್ತೆ. ಆದರೆ ಅದರ ಬಗ್ಗೆ ಸರಿಯಾಗಿ ನನಗೆ ಮಾಹಿತಿ ಗೊತ್ತಿಲ್ಲ. ಓದಿ ತಿಳಿದುಕೊಂಡು ಅದರ ಕುರಿತಾಗಿ ಮಾತನಾಡುವೆ. ಆದರೆ ಕುಮಾರಸ್ವಾಮಿ ಹೀಗೆ ಮಾಡಿರಲ್ಲ ಬಿಡಿ, ಅತೃಪ್ತ ಶಾಸಕರು ಪಕ್ಷ ಬಿಟ್ಟು ಹೋಗಿರುವ ಹಿನ್ನೆಲೆ ಹೀಗೆ ಅರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಇದೇ ವೇಳೆ ಮಾತನಾಡಿದ ಕೋಲಾರ ಸಂಸದ ಎಸ್. ಮುನಿಸ್ವಾಮಿ, ರಾಜ್ಯದಲ್ಲಿ ನೆರೆ ಇದೆ ಈ ರೀತಿಯ ಸಂದರ್ಭದಲ್ಲಿ ಹೀಗೆ ಮಾಡಲು ಅವರಿಗೆ ನಾಚಿಕೆಯಾಗಬೇಕು. ಈಗಾಗಲೇ ಜನ ಅವರನ್ನು ತಿರಸ್ಕಾರ ಮಾಡಿದ್ದಾರೆ ಹಾಗಾಗಿಯೇ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಸುಮ್ಮನಿರುವುದು ಬಿಟ್ಟು ಹೀಗೆ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ದೂರವಾಣಿ ಕದ್ದಾಲಿಕೆ ಸಮ್ಮಿಶ್ರ ಸರ್ಕಾರವಿದ್ದಾಗಾಗಿರುವುದು ಎಂಬ ಅರಿವೆ ಅವರಿಗಿಲ್ಲ ಎಂಬುದನ್ನು ತೋರಿಸಿದರು.

ನೆರೆ ಬಂದು ಸಂಕಷ್ಟದಲ್ಲಿರುವಾಗ ಸಚಿವ ಸಂಪುಟ ವಿಸ್ತರಣೆ ಸರಿಯಲ್ಲ ಹಾಗಾಗಿ ಸಂಪುಟ ವಿಸ್ತರಣೆಯಾಗಿಲ್ಲ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಗೃಹ ಸಚಿವ ಅಮಿತ್ ಶಾ ನೆರೆ ವೀಕ್ಷಣೆ ಮಾಡಿದ್ದಾರೆ. ತಡವಾದರೂ ಶೇ.100 ರಷ್ಟು ಕೇಂದ್ರದಿಂದ ಬರ ಪರಿಹಾರ ಸಿಗುತ್ತೆ ಎಂದು ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *