ಸರ್ಕಾರ ಉಳಿಯುತ್ತೋ ಬಿಡುತ್ತೋ ಗೊತ್ತಿಲ್ಲ ನಾನು ಕಾಂಗ್ರೆಸ್‍ನಲ್ಲಿ ಇರುತ್ತೇನೆ – ರಾಘವೇಂದ್ರ ಹಿಟ್ನಾಳ್

Public TV
1 Min Read

– ಆಪರೇಷನ್ ಕಮಲಕ್ಕೆ ಸಿದ್ದರಾಮಯ್ಯ ಕಾರಣ ಅಲ್ಲ

ಕೊಪ್ಪಳ: ಸರ್ಕಾರ ಉಳಿಯುತ್ತೋ ಬಿಡುತ್ತೋ ನನಗೆ ಗೊತ್ತಿಲ್ಲ. ಆದರೆ ನಾನು ಕಾಂಗ್ರೆಸ್‍ನಲ್ಲಿ ಇರುತ್ತೇನೆ ಎಂದು ಕೈ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣದ ಆಮಿಷ, ಅಧಿಕಾರದ ಆಸೆ ತೋರಿಸಿ ನಮ್ಮ ಸರ್ಕಾರವನ್ನು ಅಸ್ಥಿರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ನಾಯಕರ ಮೇಲೆ ಕಿಡಿಕಾರಿದರು.

ನಾನು ಅಮರೇಗೌಡರು ಸಿದ್ದರಾಮಯ್ಯ ಆಪ್ತರೇ. ಆಪರೇಷನ್ ಕಮಲಕ್ಕೆ ಸಿದ್ದರಾಮಯ್ಯ ಕಾರಣವಾಗಿದರೆ ನಾವು ಹೋಗಬೇಕಿತ್ತು. ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾದರೆ ನಮ್ಮನ್ನು ಏಕೆ ಸಿದ್ದರಾಮಯ್ಯ ಬಿಜೆಪಿ ಕಳಿಸಿಲ್ಲ ಎಂದು ರಾಘವೇಂದ್ರ ಹಿಟ್ನಾಳ್ ಪ್ರಶ್ನೆ ಮಾಡಿದರು.

ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ. ಕಾಂಗ್ರೆಸ್‍ನಲ್ಲಿ ಇರುತ್ತೇನೆ. ಸರ್ಕಾರ ಉಳಿಯುತ್ತೋ ಬಿಡುತ್ತೋ ಗೊತ್ತಿಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು. ಶಾಸಕರು ಕಾರ್ಯಕರ್ತರನ್ನು ವಿಚಾರಿಸದೇ ರಾಜೀನಾಮೆ ನೀಡಿದ್ದು ಸರಿ ಅಲ್ಲ ಎಂದು ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *