ಧಾರವಾಡ | ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ

1 Min Read

ಧಾರವಾಡ: ಕೊರಿಯನ್ ಗೇಮ್‍ ಗೀಳಿಗೆ (Korean Games) ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಫೆ.6 ರಂದು ಯುವಕ ಶರಣಾಗಿದ್ದ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್ ಪರಿಶೀಲನೆ ವೇಳೆ ಕೊರಿಯನ್ ಗೆಮ್ಸ್ ಪತ್ತೆಯಾಗಿದೆ. ಇದನ್ನೂ ಓದಿ: 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

ಕೊರಿಯನ್ ಗೆಮ್ಸ್‌ಗೆ ವಿಕಾಸ್ ಅಡಿಕ್ಟ್ ಆಗಿದ್ದ‌ ಎಂಬ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ. ಪಿಯುಸಿ ಸೈನ್ಸ್ ಮುಗಿಸಿ ಮನೆಯಲ್ಲೇ ಇದ್ದ ವಿಕಾಸ್ ಯಾರಿಗೂ ಗೊತ್ತಿಲ್ಲದೇ ಗೆಮ್ಸ್ ಆಡುತಿದ್ದ. ಇನ್ನೂ ಸಾವಿಗೂ ಮುನ್ನ ನನ್ನ ಸಾವಿಗೆ ನಾನೇ ಕಾರಣ ಎಂದು ಸೆಲ್ಫ್ ಮೆಸೇಜ್ ಮಾಡಿ‌ ಸಾವಿಗೀಡಾಗಿದ್ದ. ಈ ಸಂಬಂಧ ಅಸಹಜ ಸಾವು ಎಂದು ದೂರು ದಾಖಲಾಗಿತ್ತು. ಇದನ್ನೂ ಓದಿ: ಮೈಸೂರು | ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ಎದೆ ಝಲ್‌ ಎನಿಸುತ್ತೆ ವಿಡಿಯೋ

Share This Article